ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಕಾರ್ಮಿಕರು ನಾಪತ್ತೆ, ಕೊಚ್ಚಿಹೋಗಿರುವ ಶಂಕೆ

ಯಮುನೋತ್ರಿ ಹೆದ್ದಾರಿಯಲ್ಲಿ ಮೇಘಸ್ಫೋಟದ ಬಗ್ಗೆ ಮಧ್ಯರಾತ್ರಿಯ ಸುಮಾರಿಗೆ ಮಾಹಿತಿ ಬಂದಿದೆ ಎಂದು ಬಾರ್ಕೋಟ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೀಪಕ್ ಕಥೈತ್ ತಿಳಿಸಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಒಂಬತ್ತು ರಸ್ತೆ ನಿರ್ಮಾಣ ಕಾರ್ಮಿಕರು ಕೊಚ್ಚಿಹೋಗಿರುವ ಶಂಕೆಯಿದೆ.

ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಬಾರ್ಕೋಟ್ ಪ್ರದೇಶದ ಸಿಲೈ ಬೆಂಡ್ ಬಳಿ ಭಾರೀ ಮಳೆ ಮತ್ತು ಮೇಘಸ್ಫೋಟದ ಪರಿಣಾಮವಾಗಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಉತ್ತರಕಾಶಿಯ ವಿಪತ್ತು ನಿಯಂತ್ರಣ ಕೊಠಡಿ ತಿಳಿಸಿದೆ.

ಯಮುನೋತ್ರಿ ಹೆದ್ದಾರಿಯಲ್ಲಿ ಮೇಘಸ್ಫೋಟದ ಬಗ್ಗೆ ಮಧ್ಯರಾತ್ರಿಯ ಸುಮಾರಿಗೆ ಮಾಹಿತಿ ಬಂದಿದೆ ಎಂದು ಬಾರ್ಕೋಟ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೀಪಕ್ ಕಥೈತ್ ತಿಳಿಸಿದ್ದಾರೆ.

Representational image
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಪ್ರವಾಹ: ಐವರು ಸಾವು, ಹಲವರು ನಾಪತ್ತೆ; Video

ಸ್ಥಳಕ್ಕೆ ಧಾವಿಸಿದ ತಂಡವು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಅಲ್ಲಿ ಡೇರೆಗಳನ್ನು ಹಾಕಿಕೊಂಡು ವಾಸಿಸುತ್ತಿದ್ದರು. ಅವರು ಭಾರೀ ಮಳೆಗೆ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ ಎಂಟರಿಂದ ಒಂಬತ್ತು ಜನರು ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಮಿಕರೆಲ್ಲರೂ ನೇಪಾಳಿ ಮೂಲದವರಾಗಿದ್ದು, ಹುಡುಕಾಟ ನಡೆಯುತ್ತಿದೆ. ಮೇಘಸ್ಫೋಟದ ನಂತರ ಸಿಲೈ ಬೆಂಡ್ ಸೇರಿದಂತೆ ಹಲವು ಸ್ಥಳಗಳಲ್ಲಿ ಹೆದ್ದಾರಿಯನ್ನು ಮುಚ್ಚಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com