ಕ್ಯಾಬಿನ್‌ನಲ್ಲಿ ಸುಟ್ಟ ವಾಸನೆ: ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್!

ಶನಿವಾರ ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ. ತದನಂತರ ಮುಂಬೈಗೆ ವಿಮಾನ ಮರಳಬೇಕಾಯಿತು.
AIR India Flight
ಏರ್ ಇಂಡಿಯಾ ವಿಮಾನ
Updated on

ಮುಂಬೈ: ದೇಶದಲ್ಲಿ ಇತ್ತೀಚಿಗೆ ಸಂಭವಿಸಿದ ಅಹಮದಾಬಾದ್ ವಿಮಾನ ದುರಂತ ಸೇರಿದಂತೆ ಕೆಲ ವಿಮಾನ ತುರ್ತು ಲ್ಯಾಂಡಿಂಗ್, ಹುಸಿ ಬಾಂಬ್ ಬೆದರಿಕೆಯಂತಹ ಪ್ರಕರಣಗಳು ಮರು ಕಳಿಸುತ್ತಿದ್ದು, ಜನರು ವಿಮಾನದಲ್ಲಿ ಪ್ರಯಾಣಿಸಲು ಆತಂಕಪಡುವಂತಾಗಿದೆ.

ಇದೇ ರೀತಿ ಶನಿವಾರ ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ. ತದನಂತರ ಮುಂಬೈಗೆ ವಿಮಾನ ಮರಳಬೇಕಾಯಿತು. ಆದರೆ, ವಾಪಸ್ಸಾದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಮುಂಬೈಯಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ AI 639 ವಿಮಾನದಲ್ಲಿ ಸುಟ್ಟ ವಾಸನೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮುಂಬೈಗೆ ಮರಳಿದೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ವಿಮಾನ ಬದಲಾವಣೆ ಪ್ರಾರಂಭಿಸಲಾಯಿತು. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಆದ ಅನಾನುಕೂಲವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಬೆಂಬಲ ಒದಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

AIR India Flight
Ahmedabad plane crash: ಡಿಎನ್ಎ ಹೊಂದಾಣಿಕೆ, ಕೊನೆಯ ಮೃತದೇಹ ಕುಟುಂಬಕ್ಕೆ ಹಸ್ತಾಂತರ; ಒಟ್ಟು ಮೃತರ ಸಂಖ್ಯೆ 260

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com