ರಾಜಸ್ಥಾನ: ಪೈಪ್‌ಲೈನ್ ಅಗೆಯುವ ವೇಳೆ ಮಣ್ಣು ಕುಸಿದು ನಾಲ್ವರು ಸಾವು, ಐವರು ಸಿಲುಕಿರುವ ಶಂಕೆ

ಜಂಗಿ ಕಾ ನಾಗ್ಲಾ ಗ್ರಾಮದ ಬಳಿ ಪೈಪ್‌ಲೈನ್ ಹಾಕಲು ಅಗೆದ 10 ಅಡಿ ಆಳದ ಕಂದಕವನ್ನು ಕೆಲವು ಕಾರ್ಮಿಕರು ತುಂಬುತ್ತಿದ್ದಾಗ ಮಣ್ಣು ಕುಸಿದಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
Representational image
ಸಾಂದರ್ಭಿಕ ಚಿತ್ರ
Updated on

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಭಾನುವಾರ ಬೆಳಗ್ಗೆ ಪೈಪ್ ಲೈನ್ ಅಗೆಯುವ ಕೆಲಸದ ಸಮಯದಲ್ಲಿ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಜಂಗಿ ಕಾ ನಾಗ್ಲಾ ಗ್ರಾಮದ ಬಳಿ ಪೈಪ್‌ಲೈನ್ ಹಾಕಲು ಅಗೆದ 10 ಅಡಿ ಆಳದ ಕಂದಕವನ್ನು ಕೆಲವು ಕಾರ್ಮಿಕರು ತುಂಬುತ್ತಿದ್ದಾಗ ಮಣ್ಣು ಕುಸಿದಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಹನ್ನೆರಡು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಕಾರ್ಮಿಕರ ಕೂಗು, ಚೀರಾಟ ಕೇಳಿ, ಇತರ ಕಾರ್ಮಿಕರು ಮತ್ತು ಯೋಜನಾ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಪ್ರಯತ್ನಗಳನ್ನು ಪ್ರಾರಂಭಿಸಿದರು. ಆದರೆ ಮಣ್ಣಿನ ಆಳ ಮತ್ತು ಭಾರದಿಂದಾಗಿ ರಕ್ಷಣಾ ಪ್ರಯತ್ನಗಳಿಗೆ ಅಡ್ಡಿಯುಂಟಾದವು.

ಜಿಲ್ಲಾಡಳಿತ, ಪೊಲೀಸ್ ಮತ್ತು ವಿಪತ್ತು ನಿರ್ವಹಣಾ ತಂಡಗಳು ಎಚ್ಚರಿಕೆ ನೀಡಿದ ಕೂಡಲೇ ಸ್ಥಳಕ್ಕೆ ತಲುಪಿದವು. ರಕ್ಷಣಾ ತಂಡಗಳು ಮಣ್ಣು ತೆಗೆಯಲು ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ಹೊರತರಲು ಮಣ್ಣು ತೆಗೆಯುವ ಯಂತ್ರಗಳನ್ನು ಬಳಸಿದವು.

ಮಣ್ಣಿನಡಿಯಿಂದ ಆರು ಕಾರ್ಮಿಕರನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಅವರಲ್ಲಿ ಇಬ್ಬರು ಮೃತಪಟ್ಟರು. ಇನ್ನಿಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇನ್ನೂ ಐದು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com