BSP ರಾಷ್ಟ್ರೀಯ ಸಂಯೋಜಕರಾಗಿ ಸಹೋದರ ಆನಂದ್ ಬದಲಿಗೆ ರಣಧೀರ್ ಬೇನಿವಾಲ್ ನೇಮಿಸಿದ ಮಾಯಾವತಿ

ಮಾಯಾವತಿ ಅವರು, ಆನಂದ್ ಕುಮಾರ್ ಅವರ ಪುತ್ರ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕುವುದರ ಜೊತೆಗೆ, ತಮ್ಮ ಉತ್ತರಾಧಿಕಾರಿಯಾಗಿ ಯಾರನ್ನೂ ಘೋಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Mayawati
ಮಾಯಾವತಿPTI
Updated on

ಲಖನೌ: ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದಲ್ಲಿ ನಡೆಯುತ್ತಿರುವ ಕುಟುಂಬ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸಹೋದರ ಆನಂದ್ ಕುಮಾರ್ ಅವರ ಬದಲಿಗೆ ರಣಧೀರ್ ಬೇನಿವಾಲ್ ರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕರಾಗಿ ಬುಧವಾರ ನೇಮಕ ಮಾಡಿದ್ದಾರೆ.

ಇತ್ತೀಚೆಗೆ ರಾಷ್ಟ್ರೀಯ ಸಂಯೋಜಕರಾಗಿ ನೇಮಕಗೊಂಡಿದ್ದ ಬಿಎಸ್‌ಪಿಯ ರಾಷ್ಟ್ರೀಯ ಉಪಾಧ್ಯಕ್ಷ ಆನಂದ್ ಕುಮಾರ್ ಅವರು, ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಒಂದೇ ಹುದ್ದೆಯಲ್ಲಿ ಕೆಲಸ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಪಕ್ಷದ ರಾಜ್ಯಸಭಾ ಸದಸ್ಯ ರಾಮ್‌ಜಿ ಗೌತಮ್ ಮತ್ತು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕರಾಗಿ ನೇಮಕಗೊಂಡಿರುವ ರಣಧೀರ್ ಬೇನಿವಾಲ್ ಇಬ್ಬರೂ ನನ್ನ ಮಾರ್ಗದರ್ಶನದಲ್ಲಿ ದೇಶದ ವಿವಿಧ ರಾಜ್ಯಗಳ ಜವಾಬ್ದಾರಿಗಳನ್ನು ನೇರವಾಗಿ ನಿರ್ವಹಿಸುತ್ತಾರೆ ಎಂದು ಮಾಯಾವತಿ ಹೇಳಿದ್ದಾರೆ.

Mayawati
ಭಾರತದ ಚುನಾವಣೆಗಳಲ್ಲಿ 'ವಿದೇಶಿ ಪ್ರಭಾವ'ದ ಬಗ್ಗೆ ಮಾಯಾವತಿ ಕಳವಳ

ಗಮನಾರ್ಹವಾಗಿ, ಮಾಯಾವತಿ, ಆನಂದ್ ಕುಮಾರ್ ಅವರ ಪುತ್ರ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕುವುದರ ಜೊತೆಗೆ, ತಮ್ಮ ಉತ್ತರಾಧಿಕಾರಿಯಾಗಿ ಯಾರನ್ನೂ ಘೋಷಿಸುವುದಿಲ್ಲ ಮತ್ತು ತಮ್ಮ ಕೊನೆಯ ಉಸಿರಿರುವವರೆಗೂ ಪಕ್ಷಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com