
ನವದೆಹಲಿ: ಭಾರತೀಯ ಜನತಾ ಪಕ್ಷ ಗುರುವಾರ ತನ್ನ ಎಲ್ಲಾ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, 2025-26ರ ಕೇಂದ್ರ ಬಜೆಟ್ ಅಂಗೀಕಾರಕ್ಕಾಗಿ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದೆ.
ಬಿಜೆಪಿಯ ಎಲ್ಲಾ ಲೋಕಸಭಾ ಸದಸ್ಯರು ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬೆಂಬಲಿಸಬೇಕು" ಎಂದು ಕೇಸರಿ ಪಕ್ಷ ತನ್ನ ವಿಪ್ ನಲ್ಲಿ ತಿಳಿಸಿದೆ.
ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದರು.
ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳ ಸಂಸದರು ಇಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಟೀ ಶರ್ಟ್ಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದರಿಂದ ತೀವ್ರ ಗದ್ದಲ ಹಾಗೂ ಕೋಲಾಹಲ ಏರ್ಪಟ್ಟು ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
Advertisement