ಬಿಜೆಪಿ ಸಂಸದರಿಗೆ ವಿಪ್ ಜಾರಿ, ನಾಳೆ ಸಂಸತ್ತಿನಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

ಬಿಜೆಪಿಯ ಎಲ್ಲಾ ಲೋಕಸಭಾ ಸದಸ್ಯರು ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬೆಂಬಲಿಸಬೇಕು" ಎಂದು ಕೇಸರಿ ಪಕ್ಷ ತನ್ನ ವಿಪ್ ನಲ್ಲಿ ತಿಳಿಸಿದೆ.
File photo
ಲೋಕಸಭೆ
Updated on

ನವದೆಹಲಿ: ಭಾರತೀಯ ಜನತಾ ಪಕ್ಷ ಗುರುವಾರ ತನ್ನ ಎಲ್ಲಾ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, 2025-26ರ ಕೇಂದ್ರ ಬಜೆಟ್ ಅಂಗೀಕಾರಕ್ಕಾಗಿ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದೆ.

ಬಿಜೆಪಿಯ ಎಲ್ಲಾ ಲೋಕಸಭಾ ಸದಸ್ಯರು ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬೆಂಬಲಿಸಬೇಕು" ಎಂದು ಕೇಸರಿ ಪಕ್ಷ ತನ್ನ ವಿಪ್ ನಲ್ಲಿ ತಿಳಿಸಿದೆ.

ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದರು.

File photo
ಕ್ಷೇತ್ರ ಪುನರ್ ವಿಂಗಡಣೆ: ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ, ನಾಳೆಗೆ ಕಲಾಪ ಮುಂದೂಡಿಕೆ

ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳ ಸಂಸದರು ಇಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಟೀ ಶರ್ಟ್‌ಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದರಿಂದ ತೀವ್ರ ಗದ್ದಲ ಹಾಗೂ ಕೋಲಾಹಲ ಏರ್ಪಟ್ಟು ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com