ಉತ್ತರ ಪ್ರದೇಶ: ದಲಿತರಿಗೆ ಬಣ್ಣ ಹಚ್ಚಲು ಬಲಪ್ರಯೋಗ; 42 ಜನರ ವಿರುದ್ಧ ಕೇಸ್ ದಾಖಲು

ಹೋಳಿ ವೇಳೆ ಮೇಲ್ಜಾತಿಯ ಯುವಕರು ಪರಿಶಿಷ್ಟ ಜಾತಿಯ ಜನರಿಗೆ ಬಣ್ಣ ಹಚ್ಚಲು ಬಲಪ್ರಯೋಗ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಥುರಾ: ಉತ್ತರ ಪ್ರದೇಶದ ಮಥುರಾದ ಹಳ್ಳಿಯೊಂದರಲ್ಲಿ ಹೋಳಿ ಹಬ್ಬದಂದು ದಲಿತರಿಗೆ ಬಲವಂತವಾಗಿ ಬಣ್ಣ ಹಚ್ಚಿದ ಆರೋಪದ ಮೇಲೆ ಸುಮಾರು 42 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಹೋಳಿ ಆಡುವ ದಿನವಾದ ಧುಲೆಂಡಿಯಂದು ಜೈತ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಟಿ ಗ್ರಾಮದಲ್ಲಿ ಕೆಲವು ಮೇಲ್ಜಾತಿಯ ಯುವಕರು ಪರಿಶಿಷ್ಟ ಜಾತಿಯ ಜನರಿಗೆ ಬಣ್ಣ ಹಚ್ಚಲು ಬಲಪ್ರಯೋಗ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂದರ್ಭದಲ್ಲಿ ಎರಡೂ ಕಡೆಯವರು ಕೋಲುಗಳಿಂದ ಹೊಡೆದಾಡಿಕೊಂಡರು ಮತ್ತು ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಒಂದು ಡಜನ್ ಜನ ಗಾಯಗೊಂಡಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಹೋಳಿ ಆಚರಣೆ ವೇಳೆ ನೇಪಾಳಿ ಗುಂಪುಗಳ ನಡುವೆ ಘರ್ಷಣೆ, ಮೂವರ ಬಂಧನ

ಘಟನೆ ನಂತರ ಪೊಲೀಸರು 32 ದಲಿತರ ವಿರುದ್ಧ ಪ್ರಕರಣ ದಾಖಲಿಸಿದ್ದರು ಮತ್ತು ಅವರಲ್ಲಿ ಒಂಬತ್ತು ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಶುಕ್ರವಾರ, ದಲಿತಪರ ಸಂಘಟನೆಗಳು, ಕಲೆಕ್ಟರೇಟ್‌ನಲ್ಲಿ ಧರಣಿ ನಡೆಸಿ, ಮೇಲ್ಜಾತಿಯವರ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

ಬಾಟಿ ಗ್ರಾಮದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಶುಕ್ರವಾರ 42 ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವೃತ್ತ ಅಧಿಕಾರಿ (ಸದರ್) ಸಂದೀಪ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com