ತೆಲಂಗಾಣ ಸುರಂಗ ಮಾರ್ಗ ಕುಸಿತ: ಮತ್ತೊಂದು ಮೃತದೇಹ ಹೊರಕ್ಕೆ; 32ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

ಕಳೆದ ಫೆಬ್ರವರಿ 22 ರಂದು ಎಂಟು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸುರಂಗದೊಳಗೆ ಸಿಲುಕಿಹಾಕಿಕೊಂಡಿದ್ದರು. ಅವರಿಗಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಹುಡುಕಾಟ ನಡೆಸಲಾಗಿತ್ತು.
Rescue operation continues
ರಕ್ಷಣಾ ಕಾರ್ಯ ಪ್ರಗತಿಯಲ್ಲಿ
Updated on

ಹೈದರಾಬಾದ್: ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗದೊಳಗೆ ಇಂದು ಮಂಗಳವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಕಾರ್ಮಿಕರು ನಿರ್ವಹಣಾ ಕೆಲಸ ಮಾಡುತ್ತಿದ್ದ ಕನ್ವೇಯರ್ ಬೆಲ್ಟ್‌ನಿಂದ 50 ಮೀಟರ್ ದೂರದಲ್ಲಿ ಶವ ಪತ್ತೆಯಾಗಿದ್ದು, ಶವದ ಗುರುತು ಪತ್ತೆ ಆಗಿಲ್ಲ.

ಕಳೆದ ಫೆಬ್ರವರಿ 22 ರಂದು ಎಂಟು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸುರಂಗದೊಳಗೆ ಸಿಲುಕಿಹಾಕಿಕೊಂಡಿದ್ದರು. ಅವರಿಗಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಹುಡುಕಾಟ ನಡೆಸಲಾಗಿತ್ತು. ಕಾರ್ಮಿಕರಲ್ಲಿ ಒಬ್ಬರಾದ ಗುರುಪ್ರೀತ್ ಸಿಂಗ್ ಎಂಬುವವರ ಶವವನ್ನು ಮಾರ್ಚ್ 9 ರಂದು ಹೊರತೆಗೆಯಲಾಗಿತ್ತು. ನಂತರ ರಕ್ಷಣಾ ಪ್ರಯತ್ನಗಳು ಮುಂದುವರಿದಿದ್ದರೂ ಉಳಿದ ಆರು ಕಾರ್ಮಿಕರ ಭವಿಷ್ಯ ಅನಿಶ್ಚಿತವಾಗಿದೆ.

Rescue operation continues
SLBC ಸುರಂಗ ಕುಸಿತ: ರಕ್ಷಣಾ ಕಾರ್ಯದಲ್ಲಿ ರೋಬೋಟ್‌ ನಿಯೋಜನೆ- ತೆಲಂಗಾಣ ನೀರಾವರಿ ಸಚಿವ

ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ತಂಡಗಳು ದಣಿವರಿಯಿಲ್ಲದೆ ಕೆಲಸ ಮಾಡುತ್ತಿರುವಾಗ ರಕ್ಷಣಾ ಕಾರ್ಯಾಚರಣೆಗಳು ಈಗ 32 ನೇ ದಿನಕ್ಕೆ ಕಾಲಿಟ್ಟಿದೆ. ಹೊಸದಾಗಿ ಪತ್ತೆಯಾಗಿರುವ ಮೃತದೇಹವನ್ನು ಗುರುತಿಸುವ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದು, ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಮುಂದಿನ ದಿನಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಗತಿ ಸಾಧಿಸುವ ಭರವಸೆಯನ್ನು ಅಧಿಕಾರಿಗಳು ಹೊಂದಿದ್ದಾರೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಎಸ್ ಸಿಸಿಎಲ್, ಅನ್ವಿ ರೊಬೊಟಿಕ್ಸ್ ಮತ್ತು ಇತರ ತಂಡಗಳು ಸೇರಿದಂತೆ ಬಹು ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com