Leader of Opposition in the Lok Sabha Rahul Gandhi during the Budget session of Parliament, in New Delhi, Wednesday, March 26, 2025.
ಬುಧವಾರ, ಮಾರ್ಚ್ 26, 2025 ರಂದು ನವದೆಹಲಿಯಲ್ಲಿ ನಡೆದ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ.PTI

ಸದನ ನಡೆಸಲು ಯಾವುದೇ ಮಾರ್ಗವಿಲ್ಲ.. ಮಾತನಾಡಲು ಅವಕಾಶ ನೀಡುತ್ತಿಲ್ಲ: ಲೋಕಸಭಾ ಸ್ಪೀಕರ್ ವಿರುದ್ಧ Rahul Gandhi

ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು. ಕಳೆದ ಹಲವಾರು ದಿನಗಳಿಂದ ಸದನದಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.
Published on

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅಸಮಾಧಾನಗೊಂಡಿದ್ದು, ಸ್ಪೀಕರ್ ಓಂ ಬಿರ್ಲಾ ಅವರು, ಸದನದಲ್ಲಿ ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ, ಅವಕಾಶ ಕೇಳಿದರೆ ಓಡಿ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು. ಕಳೆದ ಹಲವಾರು ದಿನಗಳಿಂದ ಸದನದಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

"ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ... ನನಗೆ ಮಾತನಾಡಲು ಅವಕಾಶ ನೀಡುವಂತೆ ನಾನು ಸ್ಪೀಕರ್ ಅವರನ್ನು ವಿನಂತಿಸಿದೆ. ಆದರೆ ಅವರು ಓಡಿಹೋದರು. ಸದನವನ್ನು ನಡೆಸಲು ಇದು ಮಾರ್ಗವಲ್ಲ. ಸ್ಪೀಕರ್ ಸುಮ್ಮನೆ ಹೊರಟುಹೋದರು. ಅವರು ನನಗೆ ಮಾತನಾಡಲು ಬಿಡಲಿಲ್ಲ... ಅವರು ನನ್ನ ಬಗ್ಗೆ ಆಧಾರ ರಹಿತವಾದದ್ದನ್ನು ಹೇಳಿದರು... ಅಗತ್ಯ ಇಲ್ಲದಿದ್ದರೂ ಸದನವನ್ನು ಮುಂದೂಡಿದರು" ಎಂದು ಅವರು ಹೇಳಿದರು.

Leader of Opposition in the Lok Sabha Rahul Gandhi during the Budget session of Parliament, in New Delhi, Wednesday, March 26, 2025.
Lok sabha: 35 ತಿದ್ದುಪಡಿ ಮಾಡಿ ಹಣಕಾಸು ಮಸೂದೆ 2025ಕ್ಕೆ ಲೋಕಸಭೆ ಅಂಗೀಕಾರ!

'ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು ಲೋಕಸಭೆ ವಿರೋಧ ಪ‍ಕ್ಷದ ನಾಯಕರು ಪಾಲಿಸಬೇಕು. ನನ್ನ ಬಗ್ಗೆ ಹೇಳಿಕೆ ನೀಡಿ, ನನಗೆ ಮಾತನಾಡಲೂ ಅವಕಾಶ ನೀಡದೆ ಸದನವನ್ನು ಮುಂದೂಡಿದರು. ಕಳೆದ ವಾರವೂ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ.

ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ ನಾನು ಮಾತನಾಡುವಾಗಲೆಲ್ಲಾ ನನ್ನನ್ನು ತಡೆಯಲಾಗುತ್ತಿದೆ. ನಾನು ಸುಮ್ಮನೇ ಕುಳಿತುಕೊಳ್ಳಬೇಕಾಯಿತು. ಇಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇಲ್ಲ. ಮಹಾಕುಂಭಮೇಳ, ನಿರುದ್ಯೋಗದ ಬಗ್ಗೆ ನಾನು ಮಾತನಾಡಬೇಕೆಂದಿದ್ದೆ ಎಂದು ರಾಹುಲ್ ಗಾಂಧಿ ಹೇಳಿದರು.

ಸ್ಪೀಕರ್ ಹೇಳಿದ್ದೇನು?

ಏತನ್ಮಧ್ಯೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರ ಸಭ್ಯತೆಯನ್ನು ಕಾಪಾಡಿಕೊಳ್ಳುವ ಮತ್ತು ಕಾರ್ಯವಿಧಾನದ ನಿಯಮಗಳನ್ನು ಅನುಸರಿಸುವ ಮಹತ್ವದ ಬಗ್ಗೆ ಮಾತನಾಡಿದರು. "ಸದಸ್ಯರ ನಡವಳಿಕೆಯು ಸದನದಲ್ಲಿ ನಿರೀಕ್ಷಿಸಲಾದ ಉನ್ನತ ಮಾನದಂಡಗಳಿಗೆ ಅನುಗುಣವಾಗಿಲ್ಲದ ಹಲವಾರು ನಿದರ್ಶನಗಳು ನನ್ನ ಗಮನಕ್ಕೆ ಬಂದಿವೆ ಎಂದ ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರು ಪಾಲಿಸಬೇಕಾದ ನಿಯಮಗಳನ್ನು ವಿವರಿಸುವ ನಿಯಮ 349 ಅನ್ನು ಅವರು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

"ಈ ಸದನದಲ್ಲಿ, ತಂದೆ ಮತ್ತು ಮಗಳು, ತಾಯಿ ಮತ್ತು ಮಗಳು, ಗಂಡ ಮತ್ತು ಹೆಂಡತಿ ಸದಸ್ಯರಾಗಿದ್ದಾರೆ. ಈ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ನಿಯಮಗಳಿಗೆ ಅನುಸಾರವಾಗಿ ವರ್ತಿಸಬೇಕೆಂದು ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದರು. ಸ್ಪೀಕರ್ ಈ ಅಭಿಪ್ರಾಯವನ್ನು ನೀಡಲು ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com