ಉತ್ತರ ಪ್ರದೇಶ: ದುಡ್ಡಿನ ಆಮಿಷವೊಡ್ಡಿ ಇಸ್ಲಾಂ ಧರ್ಮಕ್ಕೆ ಅಪ್ರಾಪ್ತ ಬಾಲಕನ ಮತಾಂತರ, ಸುನ್ನತಿ!

ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ಮುಜಾಫರ್‌ನಗರ: ಏನು ಅರಿಯದ ಅಪ್ರಾಪ್ತ ಬಾಲಕನೊಬ್ಬನಿಗೆ ಹಣದ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಕ್ಷೌರಿಕನಿಂದ ಬಾಲಕನಿಗೆ ಸುನ್ನತಿ ಕೂಡ ಮಾಡಿಸಲಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಈ ಸಂಬಂಧ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದು, ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಮಗನಿಗೆ ಹಣದ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

BNS ಮತ್ತು ಯುಪಿ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಸಂಬಂಧಿತ ಸೆಕ್ಷನ್ ಗಳಡಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಇಮ್ರಾನ್, ನೂರ್ ಅಲಿ ಮತ್ತು ಮಂಗೇ ರಾಮ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸರ್ಕಲ್ ಆಫೀಸರ್ ರಾಜ್‌ಕುಮಾರ್ ಸಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Casual Images
ಪ್ರೀತಿಸಿದ ಗೆಳತಿಯನ್ನು ಮದುವೆಯಾಗಲು ಮುಸ್ಲಿಂ ವ್ಯಕ್ತಿ ಹಿಂದೂ ಧರ್ಮಕ್ಕೆ ಮತಾಂತರ!

ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com