ಹಳ್ಳಿ ಜನರಿಗೆ ನೂರಾರು ಕೋಟಿ ರೂಪಾಯಿ ವಂಚನೆ: ನಟ ಶ್ರೇಯಸ್ ತಲ್ಪಡೆ ವಿರುದ್ಧ ಕೇಸ್ ದಾಖಲು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಸಹಕಾರಿ ಸಂಘವೊಂದು ಚಿಟ್ ಫಂಡ್ ಹೆಸರಿನಲ್ಲಿ ಗ್ರಾಮಸ್ಥರಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಲಾಗಿದೆ.
ಶ್ರೇಯಸ್ ತಲ್ಪಡೆ
ಶ್ರೇಯಸ್ ತಲ್ಪಡೆ
Updated on

ಉತ್ತರಪ್ರದೇಶ: ಬಾಲಿವುಡ್ ನಟ ಶ್ರೇಯಸ್ ತಲ್ಪಡೆ ಅವರು ಕಡಿಮೆ ಸಮಯದಲ್ಲಿ ಲಾಭ ಗಳಿಸುವುದಾಗಿ ಭರವಸೆ ನೀಡಿ ಗ್ರಾಮಸ್ಥರಿಂದ ನೂರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಅನೇಕ ಜನರ ವಿರುದ್ಧ ದೂರುಗಳು ದಾಖಲಾಗಿವೆ.

ಪುಷ್ಪ 2 ರ ಹಿಂದಿ ಆವೃತ್ತಿಯಲ್ಲಿ ಅಲ್ಲು ಅರ್ಜುನ್ ಪಾತ್ರಕ್ಕೆ ಅವರು ಡಬ್ ಮಾಡಿದ್ದಾರೆ. ತಮ್ಮ ಸಹಜ ನಟನೆಯಿಂದ ಪ್ರೇಕ್ಷಕರನ್ನು ರಂಜಿಸಿದ್ದ ಈ ನಟ ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ನೂರಾರು ಕೋಟಿ ರೂಪಾಯಿಗಳ ಹಗರಣದ ಆರೋಪದ ಮೇಲೆ ಶ್ರೇಯಸ್ ತಲ್ಪಡೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಸಹಕಾರಿ ಸಂಘವೊಂದು ಚಿಟ್ ಫಂಡ್ ಹೆಸರಿನಲ್ಲಿ ಗ್ರಾಮಸ್ಥರಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಲಾಗಿದೆ. ಅದು ಸಾರ್ವಜನಿಕರಿಂದ ಹಣವನ್ನು ಪಡೆದು ಕಡಿಮೆ ಸಮಯದಲ್ಲಿ ಅದನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿ, ನಂತರ ಕೈಬಿಟ್ಟಿತು.

ಈ ವಂಚನೆ ಕಳೆದ ಒಂದು ದಶಕದಿಂದ ನಡೆಯುತ್ತಿದೆ. ವಂಚನೆ ಬೆಳಕಿಗೆ ಬಂದ ನಂತರ, ಸಂಬಂಧಿತ ಅಧಿಕಾರಿಗಳು ದೂರು ದಾಖಲಿಸಿದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಬಾಲಿವುಡ್ ನಟ ಶ್ರೇಯಸ್ ತಲ್ಪಡೆ ಮತ್ತು ಇತರ 14 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಶ್ರೇಯಸ್ ತಲ್ಪಡೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ತಮ್ಮ ವಿರುದ್ಧದ ಆರೋಪಗಳು ಆಧಾರರಹಿತ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರ ತಂಡದವರು ಸ್ಪಷ್ಟನೆ ನೀಡಿದ್ದಾರೆ. ಬೇರೆ ಎಲ್ಲ ಸೆಲೆಬ್ರಿಟಿಗಳ ರೀತಿ ಶ್ರೇಯಸ್ ತಲ್ಪಡೆ ಅವರಿಗೂ ಹಲವು ಕಾರ್ಯಕ್ರಮಗಳಿಗೆ ಆಹ್ವಾನ ಬರುತ್ತದೆ. ಸಾಧ್ಯವಾದಾಗ ಅವರು ಅಂತಹ ಕಾರ್ಯಕ್ರಮಗಳಿಗೆ ತೆರಳುತ್ತಾರೆ. ಅದನ್ನು ಹೊರತುಪಡಿಸಿದರೆ ಅವರಿಗೆ ಯಾವುದೇ ಸಂಬಂಧ ಇಲ್ಲ’ ಎಂದು ಸ್ಪಷ್ಟನೆ ನೀಡಲಾಗಿದೆ.

ಶ್ರೇಯಸ್ ತಲ್ಪಡೆ
ವೃದ್ಧ ಮಹಿಳೆಗೆ ವಂಚನೆ: ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಸೇರಿ ನಾಲ್ವರು ಆರೋಪಿಗಳ ಬಂಧನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com