ಈ ಹಬ್ಬ ಸಮಾಜದಲ್ಲಿ ಭರವಸೆ, ಸಾಮರಸ್ಯ-ದಯೆಯ ಮನೋಭಾವ ಹೆಚ್ಚಿಸಲಿ: ರಂಜಾನ್ ಶುಭಾಶಯ ಕೋರಿದ ಪ್ರಧಾನಿ ಮೋದಿ

ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ರಂಜಾನ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದು, ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಸೋಮವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಜನತೆಗೆ ಈದ್ - ಉಲ್ - ಫಿತರ್ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದು, ಈದ್ ಸಹಾನುಭೂತಿ ಮತ್ತು ದಾನದ ಮನೋಭಾವವನ್ನು ಉತ್ತೇಜಿಸುವ ಸಂದರ್ಭವಾಗಿದೆ. ಈ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಪ್ರಗತಿ ಮತ್ತು ಸಂತೋಷವನ್ನು ತರಲಿ ಮತ್ತು ಸಕಾರಾತ್ಮಕ ಮನೋಭಾವದಿಂದ ಮುನ್ನಡೆಯಲು ನಮಗೆ ಶಕ್ತಿ ನೀಡಲಿ.

ಈದ್-ಉಲ್-ಫಿತರ್​ನ ಶುಭ ಸಂದರ್ಭದಲ್ಲಿ ನಾನು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಎಲ್ಲ ಭಾರತೀಯರಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ
ಸೌಗತ್-ಎ-ಮೋದಿ ಹೆಸರಲ್ಲಿ ಈದ್ ಕಿಟ್ ಕೊಡುತ್ತಿದ್ದೀರಿ, ಇದು ತುಷ್ಠೀಕರಣವಲ್ಲವೆ?: ದಿನೇಶ್ ಗುಂಡೂರಾವ್ ಪ್ರಶ್ನೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com