ಕೇರಳ: ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಯೂಟ್ಯೂಬರ್ ಬಂಧನ

ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್‌ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ತ್ರಿಶೂರ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮನ್ನುತ್ತಿ ಪೊಲೀಸರು ಎಲನಾಡು ನಿವಾಸಿ ಅನೀಶ್ ಅಬ್ರಹಾಂ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಶನಿವಾರ ರಾತ್ರಿ 9.30ರ ಸುಮಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಕ್ಷೇತ್ರ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್‌ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ಮನ್ನುತ್ತಿ ಸಬ್ ಇನ್ಸ್‌ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಕಾರನ್ನು ತೆರವುಗೊಳಿಸಲು ಪ್ರಯತ್ನಿಸಿದಾಗ, ಆತ ಅವರೊಂದಿಗೆ ಘರ್ಷಣೆಯಲ್ಲಿ ತೊಡಗಿದ್ದನು ಎನ್ನಲಾಗಿದೆ.

ಉದ್ದೇಶಪೂರ್ವಕವಾಗಿ ಬೆಂಗಾವಲು ಪಡೆಯ ವಾಹನಳ ಮಧ್ಯೆ ವಾಹನ ಚಲಾಯಿಸುವುದು, ಜೀವಕ್ಕೆ ಅಪಾಯವನ್ನುಂಟುಮಾಡುವುದು ಮತ್ತು ಪೊಲೀಸ್ ನಿರ್ದೇಶನಗಳನ್ನು ಪಾಲಿಸದಿದ್ದಕ್ಕಾಗಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com