ಇಂಥಹ ಕ್ರಮಗಳು ಸೇನೆಯ ಸ್ಥೈರ್ಯ ಕುಗ್ಗಿಸುತ್ತೆ; ಸಮಯ ವ್ಯರ್ಥ ಮಾಡ್ಬೇಡಿ: Pahalgam attack ಕುರಿತ ಪಿಐಎಲ್ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ತರಾಟೆ

"ಕನಿಷ್ಠ ವಿದ್ಯಾರ್ಥಿಗಳಿಗೆ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಅಧ್ಯಯನ ಮಾಡುತ್ತಿದ್ದವರಿಗೆ ಕೆಲವು ಸುರಕ್ಷತಾ ಕ್ರಮಗಳನ್ನು ಒದಗಿಸಿ" ಎಂದು ವಕೀಲರು ಹೇಳಿದರು.
Supreme court
ಸುಪ್ರೀಂ ಕೋರ್ಟ್ online desk
Updated on

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಿದೆ.

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)ಸಲ್ಲಿಸಲಾಗಿತ್ತು. ಈ ರೀತಿಯ ಕ್ರಮಗಳು ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

"ಈ ದೇಶದ ಪ್ರತಿಯೊಬ್ಬ ನಾಗರಿಕ ಭಯೋತ್ಪಾದನೆಯ ವಿರುದ್ಧ ಹೋರಾಡಲು ಕೈಜೋಡಿಸಿದ ನಿರ್ಣಾಯಕ ಸಮಯ ಇದು. ಒಬ್ಬ ವ್ಯಕ್ತಿಯ ಸ್ಥೈರ್ಯ ಕುಗ್ಗಿಸುವ ಯಾವುದೇ ಪ್ರಾರ್ಥನೆಯನ್ನು ಮಾಡಬೇಡಿ. ಸಮಸ್ಯೆಯ ಸೂಕ್ಷ್ಮತೆಯನ್ನು ನೋಡಿ" ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರ ಪೀಠ ಹೇಳಿದೆ.

"ಜವಾಬ್ದಾರಿಯಿಂದಿರಿ. ನೀವು ದೇಶದೆಡೆಗೆ ಸ್ವಲ್ಪ ಕರ್ತವ್ಯ ಪ್ರಜ್ಞೆ ಹೊಂದಿರಬೇಕು. ಇದುವೇ ದಾರಿ, ದಯವಿಟ್ಟು ಪಿಐಎಲ್ ಸಲ್ಲಿಸಬೇಡಿ. ನಿವೃತ್ತ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಯಾವಾಗಿನಿಂದ ಇಂತಹ ವಿಷಯಗಳನ್ನು (ಭಯೋತ್ಪಾದನೆ) ತನಿಖೆ ಮಾಡಲು ಪರಿಣಿತರಾದರು? ನಾವು ಏನನ್ನೂ ಸ್ವೀಕರಿಸುತ್ತಿಲ್ಲ. ದಯವಿಟ್ಟು ನೀವು ಎಲ್ಲಿಗೆ ಹೋಗಬೇಕೆಂದರೂ ಹೋಗಿ" ಎಂದು ಪೀಠ ಹೇಳಿದೆ.

ಅರ್ಜಿದಾರರಾದ ಫತೇಶ್ ಕುಮಾರ್ ಸಾಹು ಅವರಿಗೆ ವೈಯಕ್ತಿಕವಾಗಿ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ಇದೇ ವೇಳೆ ಅವಕಾಶ ನೀಡಿತು.

ಜಮ್ಮು ಮತ್ತು ಕಾಶ್ಮೀರದ ಮೂವರು ನಿವಾಸಿಗಳು ಸಲ್ಲಿಸಿದ ಅರ್ಜಿಯು, ಭಯೋತ್ಪಾದಕ ದಾಳಿಯ ಬಗ್ಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸುಪ್ರೀಂ ಕೋರ್ಟ್ ನ್ನು ಕೋರಿತ್ತು.

ಅರ್ಜಿದಾರರಾದ ಫತೇಶ್ ಕುಮಾರ್ ಶಾಹು, ಮೊಹಮ್ಮದ್ ಜುನೈದ್ ಮತ್ತು ವಿಕ್ಕಿ ಕುಮಾರ್, ಕೇಂದ್ರಾಡಳಿತ ಪ್ರದೇಶದ ಪ್ರವಾಸಿ ಪ್ರದೇಶಗಳಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.

Supreme court
ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರವಾಸಿಗರ ರಕ್ಷಣೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ಕೋರಿ 'ಸುಪ್ರೀಂ'ನಲ್ಲಿ ಪಿಐಎಲ್

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸ್ಥಳೀಯರೊಬ್ಬರು ಸೇರಿದಂತೆ ಇಪ್ಪತ್ತಾರು ಜನರು ಸಾವನ್ನಪ್ಪಿದ್ದರು.

ಆದಾಗ್ಯೂ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರತಿಕ್ರಿಯೆಯಾಗಿ ದಾಳಿಗಳನ್ನು ಎದುರಿಸಿದ್ದಾರೆ ಎಂದು ಹೇಳಲಾದ ಜಮ್ಮು ಮತ್ತು ಕಾಶ್ಮೀರದ ಹೊರಗೆ ಅಧ್ಯಯನ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸಲು ನಿರ್ದೇಶನಗಳನ್ನು ನೀಡಬೇಕೆಂದು ವಕೀಲರು ಒತ್ತಾಯಿಸಿದರು.

"ಕನಿಷ್ಠ ವಿದ್ಯಾರ್ಥಿಗಳಿಗೆ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಅಧ್ಯಯನ ಮಾಡುತ್ತಿದ್ದವರಿಗೆ ಕೆಲವು ಸುರಕ್ಷತಾ ಕ್ರಮಗಳನ್ನು ಒದಗಿಸಿ" ಎಂದು ವಕೀಲರು ಹೇಳಿದರು.

ಕೌನ್ಸಿಲ್‌ಗೆ ಪ್ರತಿಕ್ರಿಯಿಸಿದ ಪೀಠ, "ನೀವು ಮಾಡುತ್ತಿರುವ ಪ್ರಾರ್ಥನೆಯ ಬಗ್ಗೆ ನಿಮಗೆ ಖಚಿತವಿದೆಯೇ? ಮೊದಲು, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ತನಿಖೆ ಮಾಡಲು ನೀವು ಕೇಳುತ್ತೀರಿ. ಅವರು ತನಿಖೆ ನಡೆಸಲು ಸಾಧ್ಯವಿಲ್ಲ. ನಂತರ ನೀವು ಮಾರ್ಗಸೂಚಿಗಳು, ಪರಿಹಾರ, ನಂತರ ಪತ್ರಿಕಾ ಮಂಡಳಿಗೆ ನಿರ್ದೇಶನಗಳನ್ನು ಕೇಳುತ್ತೀರಿ. ನೀವು ರಾತ್ರಿಯಲ್ಲಿ ಈ ಎಲ್ಲಾ ವಿಷಯಗಳನ್ನು ಓದಲು ನಮ್ಮನ್ನು ಒತ್ತಾಯಿಸುತ್ತೀರಿ ಮತ್ತು ಈಗ ನೀವು ವಿದ್ಯಾರ್ಥಿಗಳ ಪರವಾಗಿ ಮಾತನಾಡುತ್ತೀರಿ" ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಕೇಂದ್ರಾಡಳಿತ ಪ್ರದೇಶದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಹೈಕೋರ್ಟ್ ನ್ನು ಸಂಪರ್ಕಿಸುವ ಸ್ವಾತಂತ್ರ್ಯ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಇದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com