'ಬಲವಂತದ ಕ್ರಮ ಬೇಡ': ಬೆಂಗಳೂರು ಕುಟುಂಬದ ಮನವಿ; ಪಾಕಿಗಳಿಗೆ ಸುಪ್ರೀಂ ಕೋರ್ಟ್ ರಕ್ಷೆ!

ಅರ್ಜಿದಾರರು ತಮ್ಮ ಬಳಿ ಭಾರತೀಯ ಪಾಸ್‌ಪೋರ್ಟ್ ಮತ್ತು ಆಧಾರ್ ಕಾರ್ಡ್ ಇದೆ ಎಂದು ಹೇಳಿಕೊಂಡಿದ್ದು, ಅದರ ಮೇಲೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ತನ್ನ ಕುಟುಂಬವನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡುವ ಆದೇಶದ ವಿರುದ್ಧ ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಏತನ್ಮಧ್ಯೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರವು ಹೊರಡಿಸಿದ ನಿರ್ದೇಶನಗಳನ್ನು ಅನುಸರಿಸಿ ಗಡೀಪಾರು ಆದೇಶಗಳನ್ನು ಎದುರಿಸುತ್ತಿರುವ ಅರ್ಜಿದಾರರು ಮತ್ತು ಅವರ ಕುಟುಂಬದ ಭಾರತೀಯ ಪೌರತ್ವದ ಹಕ್ಕುಗಳನ್ನು ಪರಿಶೀಲಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ.

ಮಾಧ್ಯಮ ವರದಿಗಳ ಪ್ರಕಾರ, ಅರ್ಜಿದಾರರು ತಮ್ಮ ಬಳಿ ಭಾರತೀಯ ಪಾಸ್‌ಪೋರ್ಟ್ ಮತ್ತು ಆಧಾರ್ ಕಾರ್ಡ್ ಇದೆ ಎಂದು ಹೇಳಿಕೊಂಡಿದ್ದು, ಅದರ ಮೇಲೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು, ಅಧಿಕಾರಿಗಳಿಗೆ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿತು. ಆದರೆ ಅದಕ್ಕೆ ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲಾಗಿಲ್ಲ.

ಏತನ್ಮಧ್ಯೆ, ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಬೇಡ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ತನಗೆ ಮತ್ತು ತನ್ನ ಐವರು ಕುಟುಂಬ ಸದಸ್ಯರಿಗೆ ಏಪ್ರಿಲ್ 25 ರಂದು ಶ್ರೀನಗರದಲ್ಲಿರುವ ವಿದೇಶಿ ನೋಂದಣಿ ಕಚೇರಿಯಿಂದ ನೋಟಿಸ್ ಬಂದಿದೆ ಎಂದು ಅರ್ಜಿದಾರರು ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ಅರ್ಜಿದಾರರು, ತಾನು ಮತ್ತು ತನ್ನ ಕುಟುಂಬ ಸದಸ್ಯರು 1997ರಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದು ಅವರು ಪಾಕಿಸ್ತಾನಿ ಪ್ರಜೆಗಳಾಗಿರುವುದರಿಂದ ಅವರ ವೀಸಾ ಅವಧಿ ಮುಗಿದ ನಂತರ ಭಾರತವನ್ನು ತೊರೆಯಬೇಕಾಗುತ್ತದೆ ಎಂದು ನೋಟಿಸ್‌ನಲ್ಲಿ "ಆಧಾರರಹಿತ ಹೇಳಿಕೆ" ನೀಡಲಾಗಿದೆ ಎಂದು ಹೇಳಿದರು. ವಾಸ್ತವವಾಗಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡ ಭಾರತ ಸರ್ಕಾರ, (ಅಲ್ಪಾವಧಿಯ) ಪ್ರವಾಸಿ ಮತ್ತು ವೈದ್ಯಕೀಯ ವೀಸಾಗಳನ್ನು ಹೊಂದಿರುವ ಪಾಕಿಸ್ತಾನಿಗಳಿಗೆ ದೇಶವನ್ನು ತೊರೆಯುವಂತೆ ಆದೇಶಿಸಿತು. ಆದಾಗ್ಯೂ, ದೀರ್ಘಾವಧಿಯ ಪರವಾನಗಿ ಹೊಂದಿರುವ ಮತ್ತು ಪಾಕಿಸ್ತಾನಿ ಮೂಲದ ಹಿಂದೂಗಳಿಗೆ ಇಲ್ಲಿ ಉಳಿಯಲು ಅವಕಾಶವಿದೆ.

ಸುಪ್ರೀಂ ಕೋರ್ಟ್
ಭಾರತದಿಂದ ದಾಳಿಯ ಭೀತಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸುಂದರ ಕಣಿವೆ ಈಗ ಖಾಲಿಖಾಲಿ!

ಆದಾಗ್ಯೂ, ಭಾರತದ ಈ ಕ್ರಮದ ನಂತರ, ಬುಧವಾರ 125 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿಯ ಮೂಲಕ ದೇಶವನ್ನು ತೊರೆದರು. ಇದರೊಂದಿಗೆ ಕಳೆದ ವಾರದಲ್ಲಿ ಒಟ್ಟು ನಿರ್ಗಮನಗಳ ಸಂಖ್ಯೆ 911ಕ್ಕೆ ತಲುಪಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com