
ಅಖ್ನೂರ್: ಬಾಗ್ಲಿಹಾರ್ ಮತ್ತು ಸಲಾಲ್ ಡ್ಯಾಂ ಗೇಟ್ ಕ್ಲೋಸ್ ಆದ ನಂತರ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ನಲ್ಲಿ ಚೆನಾಬ್ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿದ್ದಾರೆ. ಇದಕ್ಕೆ ಪಾಕಿಸ್ತಾನ ಜೊತೆಗಿನ ಸಿಂಧೂ ಜಲ ಒಪ್ಪಂದ ರದ್ದು ಕಾರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಸ್ಥಳೀಯರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಎಎನ್ಐ ಜೊತೆ ಮಾತನಾಡಿದ ಸ್ಥಳೀಯರೊಬ್ಬರು, ಪಾಕಿಸ್ತಾನಕ್ಕೆ ಒಂದು ಹನಿ ನೀರು ಕೂಡ ನೀಡುವುದನ್ನು ಬಯಸುವುದಿಲ್ಲ ಎಂದು ಎಚ್ಚರಿಸಿದರು.
ಮೊದಲು 25-30 ಅಡಿ ಎತ್ತರದಲ್ಲಿ ಚೆನಾಬ್ ನದಿ ಹರಿಯುತ್ತಿತ್ತು, ಆದರೆ ಈಗ ಇಲ್ಲಿ ಕೇವಲ 1.5-2 ಅಡಿ ನೀರು ಇದೆ. ಸಿಂಧೂ ಜಲ ಒಪ್ಪಂದ ಸ್ಥಗಿತಕ್ಕೆ ಪ್ರಧಾನಿ ಮೋದಿಯವರ ನಿರ್ಧಾರವೇ ಇದಕ್ಕೆ ಕಾರಣ. ಪಾಕಿಸ್ತಾನಕ್ಕೆ ಒಂದೇ ಒಂದು ಹನಿ ನೀರನ್ನೂ ನೀಡುವುದು ನಮಗೆ ಇಷ್ಟವಿಲ್ಲ. ನಾವೆಲ್ಲರೂ ಪ್ರಧಾನಿ ಮೋದಿಯವರೊಂದಿಗೆ ನಿಂತಿದ್ದೇವೆ ಎಂದರು.
ಚೆನಾಬ್ ನದಿಯ ನೀರಿನ ಮಟ್ಟದಲ್ಲಿ ತೀವ್ರ ಬದಲಾವಣೆಯ ಬಗ್ಗೆ ಮತ್ತೊಬ್ಬ ಸ್ಥಳೀಯರು ಆಘಾತ ವ್ಯಕ್ತಪಡಿಸಿದ್ದಾರೆ. “ನನ್ನ 75 ವರ್ಷಗಳ ಜೀವನದಲ್ಲಿ ಇದೇ ಮೊದಲ ಬಾರಿಗೆ ಚೆನಾಬ್ನಲ್ಲಿ ಇಷ್ಟು ಕಡಿಮೆ ಪ್ರಮಾಣದ ನೀರು ಕಡಿಮೆಯಾಗಿರುವುದನ್ನು ನೋಡುತ್ತಿದ್ದೇನೆ. ಈ ನಿರ್ಧಾರವನ್ನು ತೆಗೆದುಕೊಂಡ ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಪಾಕಿಸ್ತಾನ ವಿರುದ್ಧ ಜಲಾಸ್ತ್ರ ಪ್ರಯೋಗಿಸಿದೆ. 1960 ರಲ್ಲಿ ಎರಡೂ ದೇಶಗಳ ನಡುವೆ ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಲಾಗಿದೆ.
Advertisement