ದೇಶದ ಹೊರಗೆ 'Operation Sindoor': ದೇಶದೊಳಗೆ 'Mission Sankalp'; 26 ನಕ್ಸಲರನ್ನು ಕೊಂದ ಭಾರತೀಯ ಸೇನೆ!

ಕರ್ರೆಗುಟ್ಟ ಬೆಟ್ಟಗಳು ಮತ್ತು ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿರುವ ಬೆಟ್ಟಗಳಲ್ಲಿ ಏಪ್ರಿಲ್ 21ರಂದು 'ಮಿಷನ್ ಸಂಕಲ್ಪ' ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಸುಮಾರು 24 ಸಾವಿರ ಸೈನಿಕರು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು
ಭದ್ರತಾ ಪಡೆಗಳು
Updated on

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಂದು ಭರ್ಜರಿ ಬೇಟೆಯಾಡಿಟ್ಟು 26 ನಕ್ಸಲರನ್ನು ಕೊಂದಿವೆ. ಪೊಲೀಸ್ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಕರ್ರೆಗುಟ್ಟ ಬೆಟ್ಟಗಳು ಮತ್ತು ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿರುವ ಬೆಟ್ಟಗಳಲ್ಲಿ ಏಪ್ರಿಲ್ 21ರಂದು 'ಮಿಷನ್ ಸಂಕಲ್ಪ' ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಸುಮಾರು 24 ಸಾವಿರ ಸೈನಿಕರು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯ ಭಾಗವಾಗಿ ಇಂದು ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ 26 ನಕ್ಸಲರು ಸಾವನ್ನಪ್ಪಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸೋಮವಾರ ಮುಂಜಾನೆ, ಭದ್ರತಾ ಪಡೆಗಳು ಸಮವಸ್ತ್ರ ಧರಿಸಿದ್ದ ಮಹಿಳಾ ನಕ್ಸಲೈಟ್ ಒಬ್ಬಳನ್ನು ಕೊಂದು ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದವು. ಏಪ್ರಿಲ್ 24 ರಂದು ಮೂವರು ಮಹಿಳಾ ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಯಿತು.

ಬಿಜಾಪುರ ಜಿಲ್ಲೆಯ ನೈಋತ್ಯ ಗಡಿ ಪ್ರದೇಶದ ಕಾಡುಗಳಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ, ಭದ್ರತಾ ಪಡೆ ಸಿಬ್ಬಂದಿಯನ್ನು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ತಾರ್ ಪ್ರದೇಶದಲ್ಲಿ ಪ್ರಾರಂಭಿಸಲಾದ ಅತಿದೊಡ್ಡ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಗಾರ್ಡ್, ಬಸ್ತಾರ್ ಫೈಟರ್ಸ್ ಮತ್ತು ಛತ್ತೀಸ್‌ಗಢ ಪೊಲೀಸರ ಎಸ್‌ಟಿಎಫ್, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸೇರಿದಂತೆ ವಿವಿಧ ಘಟಕಗಳ ಸೈನಿಕರು ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು.

ಭದ್ರತಾ ಪಡೆಗಳು
Operation Sindoor: ಮತ್ತೊಂದು ಭರ್ಜರಿ ಬೇಟೆ; ಮೊಸ್ಟ್ ವಾಂಡೆಟ್ ಉಗ್ರ ಹಫೀಜ್ ಸಯೀದ್ ಪುತ್ರ ತಲ್ಹಾ ಹತ್ಯೆ? ದಾಳಿಯ Video Viral!

ಬಿಜಾಪುರ (ಛತ್ತೀಸ್‌ಗಢ) ಮತ್ತು ಮುಲುಗು ಮತ್ತು ಭದ್ರಾದ್ರಿ-ಕೊಥಗುಡೆಮ್ (ತೆಲಂಗಾಣ) ನಡುವಿನ ಅಂತರರಾಜ್ಯ ಗಡಿಯ ಎರಡೂ ಬದಿಗಳಲ್ಲಿ ಸುಮಾರು 800 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿರುವ ಒರಟಾದ ಭೂಪ್ರದೇಶ ಮತ್ತು ದಟ್ಟವಾದ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಥಳವು ರಾಜಧಾನಿ ರಾಯ್‌ಪುರದಿಂದ 450 ಕಿಲೋಮೀಟರ್ ದೂರದಲ್ಲಿದೆ. ಬಸ್ತಾರ್ ವಿಭಾಗದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಭದ್ರತಾ ಪಡೆಗಳು 151 ಕುಖ್ಯಾತ ನಕ್ಸಲರನ್ನು ಕೊಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ತರ್ ವಿಭಾಗವು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com