ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: ನಾಲ್ವರು ಮಕ್ಕಳು ಸೇರಿ 15 ನಾಗರಿಕರು ಸಾವು, 43 ಮಂದಿಗೆ ಗಾಯ; Video

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ ಶೆಲ್ ದಾಳಿಗೆ ಪ್ರತಿಕ್ರಿಯಿಸುತ್ತಿದೆ.
Civilians injured in Pakistani shelling receive treatment at a hospital at Uri, in Baramulla district, J&K, Wednesday.
ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸುತ್ತಿರುವುದು
Updated on

ನವದೆಹಲಿ: ಗಡಿ ನಿಯಂತ್ರಣ ರೇಖೆ ಮತ್ತು ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಗಳಲ್ಲಿ ಫಿರಂಗಿ ದಾಳಿ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಕ್ಕಳು ಮತ್ತು ಒಬ್ಬರು ಯೋಧರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟು 43 ಜನರು ಗಾಯಗೊಂಡಿದ್ದಾರೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ ಶೆಲ್ ದಾಳಿಗೆ ಪ್ರತಿಕ್ರಿಯಿಸುತ್ತಿದೆ.

ಪಾಕಿಸ್ತಾನದ ಅನಿಯಂತ್ರಿತ ಶೆಲ್ ದಾಳಿಯು ಗುರುದ್ವಾರ ಸೇರಿದಂತೆ ಮನೆಗಳು, ವಾಹನಗಳು ಮತ್ತು ವಿವಿಧ ಕಟ್ಟಡಗಳನ್ನು ನಾಶಪಡಿಸಿತು. ಗಡಿ ನಿವಾಸಿಗಳಲ್ಲಿ ಭೀತಿಯನ್ನು ಸೃಷ್ಟಿಸಿತು, ನೂರಾರು ನಿವಾಸಿಗಳು ಭೂಗತ ಬಂಕರ್‌ಗಳಲ್ಲಿ ಆಶ್ರಯ ಪಡೆಯಬೇಕಾಯಿತು ಅಥವಾ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕಾಯಿತು. ಜಮ್ಮು ಪ್ರದೇಶದ ರಾಜೌರಿ ಮತ್ತು ಉತ್ತರ ಕಾಶ್ಮೀರದ ಬಾರಾಮುಲ್ಲಾ ಮತ್ತು ಕುಪ್ವಾರಾ ಸೇರಿದಂತೆ ತೀವ್ರ ಹಾನಿಗೊಳಗಾದ ಜಿಲ್ಲೆ ಪೂಂಚ್ ಗಳಲ್ಲಿ 13 ಮಂದಿ ಮೃತಪಟ್ಟು 42 ಮಂದಿ ಗಾಯಗೊಂಡಿದ್ದಾರೆ.

Civilians injured in Pakistani shelling receive treatment at a hospital at Uri, in Baramulla district, J&K, Wednesday.
ಪಾಕ್ ಇಷ್ಟಕ್ಕೆ ಸುಮ್ಮನಾಗದಿದ್ದರೇ... ಮುಂದಿದೆ ಮಾರಿಹಬ್ಬ: Operation Sindoor ನಂತರ ಚೀನಾಕ್ಕೆ NSA ಅಜಿತ್ ದೋವಲ್ ಕಟು ಸಂದೇಶ!

ಶೆಲ್ ದಾಳಿಯ ಸಮಯದಲ್ಲಿ ಭಾರತೀಯ ಸೇನಾ ಸೈನಿಕನೊಬ್ಬರು ಹುತಾತ್ಮರಾಗಿದ್ದಾರೆ. ಯೋಧರನ್ನು 5 ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ

ಬಾಲಕೋಟ್, ಮೆಂಧರ್, ಮಂಕೋಟ್, ಕೃಷ್ಣ ಘಾಟಿ, ಗುಲ್ಪುರ್, ಕೆರ್ನಿ ಮತ್ತು ಪೂಂಚ್ ಜಿಲ್ಲಾ ಕೇಂದ್ರಗಳು ಸೇರಿದಂತೆ ಪೂಂಚ್‌ನ ಎಲ್‌ಒಸಿ ಉದ್ದಕ್ಕೂ ಶೆಲ್ ದಾಳಿ ವರದಿಯಾಗಿದ್ದು, ಇದರ ಪರಿಣಾಮವಾಗಿ ಡಜನ್ ಗಟ್ಟಲೆ ಮನೆಗಳು ಮತ್ತು ವಾಹನಗಳು ಹಾನಿಗೊಳಗಾದವು.

ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಹತ್ತು ಜನರು ಗಾಯಗೊಂಡಿದ್ದಾರೆ ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಿಯಂತ್ರಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ ಮೂವರು ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಗಾಯಗೊಂಡ ನಾಗರಿಕರು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಐವರು ಮಕ್ಕಳು ಸೇರಿದಂತೆ ಹತ್ತು ಜನರು ಗಾಯಗೊಂಡಿದ್ದಾರೆ. ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಕುಪ್ವಾರಾ ಜಿಲ್ಲೆಯ ಕರ್ನಾ ಸೆಕ್ಟರ್‌ನಲ್ಲಿ ಶೆಲ್ ದಾಳಿಯಿಂದಾಗಿ ಹಲವಾರು ಮನೆಗಳು ಬೆಂಕಿಗೆ ಆಹುತಿಯಾಗಿವೆ.

ಮೃತರನ್ನು ಬಲ್ವಿಂದರ್ ಕೌರ್ ಅಲಿಯಾಸ್ ರುಬಿ (33), ಮೊಹಮ್ಮದ್ ಜೈನ್ ಖಾನ್ (10), ಅವರ ಅಕ್ಕ ಜೋಯಾ ಖಾನ್ (12), ಮೊಹಮ್ಮದ್ ಅಕ್ರಮ್ (40), ಅಮ್ರಿಕ್ ಸಿಂಗ್ (55), ಮೊಹಮ್ಮದ್ ಇಕ್ಬಾಲ್ (45), ರಂಜೀತ್ ಸಿಂಗ್ (48), ಶಕೀಲಾ ಬಿ (40), ಅಮರ್‌ಜೀತ್ ಸಿಂಗ್ (47), ಮರಿಯಮ್ ಖಾಟೂನ್ (7), ವಿಹಾನ್ ಭಾರ್ಗವ್ (13) ಮತ್ತು ಮೊಹಮ್ಮದ್ ರಫಿ (40) ಮತ್ತು ಸೇನೆಯ ಲ್ಯಾನ್ಸ್ ನಾಯಕ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ.

ಭಯೋತ್ಪಾದಕ ಮೂಲಸೌಕರ್ಯದ ಮೇಲೆ ಈ "ನಿಖರ ದಾಳಿ"ಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ. ಪಾಕಿಸ್ತಾನದ ಸೇನೆಯು ಆರು ಸ್ಥಳಗಳನ್ನು ಗುರಿಯಾಗಿಸಿಕೊಂಡಿದೆ. ಇವುಗಳಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹಾವಲ್ಪುರ, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಕೇಂದ್ರ ಮತ್ತು ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮುರಿಡ್ಕೆ ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com