'ಆಪರೇಷನ್ ಸಿಂಧೂರ್': 100 ಉಗ್ರರ ಹತ್ಯೆ, ಪಾಕಿಸ್ತಾನ ದಾಳಿ ಮಾಡಿದರೆ ಸುಮ್ಮನೆ ಬಿಡಲ್ಲ; ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್

ಗಡಿ ನಿಯಂತ್ರಣ ರೇಖೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸದಂತೆ ಪಾಕಿಸ್ತಾನ ತನ್ನದೇ ಆದ ಮಿಲಿಟರಿ ಪ್ರತಿಕ್ರಿಯೆಯನ್ನು ಪರಿಗಣಿಸುತ್ತಿದೆ ಎಂದು ವರದಿಗಳು ಸೂಚಿಸುತ್ತವೆ ಎಂದು ಸಹ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
Rajanath Singh
ರಾಜನಾಥ್ ಸಿಂಗ್
Updated on

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ನಲ್ಲಿ ಕನಿಷ್ಠ 100 ಉಗ್ರರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಗುರುವಾರ ಸರ್ವಪಕ್ಷ ಸಭೆಯಲ್ಲಿ ದೃಢಪಡಿಸಿದ್ದಾರೆ.

ಗಡಿ ನಿಯಂತ್ರಣ ರೇಖೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸದಂತೆ ಪಾಕಿಸ್ತಾನ ತನ್ನದೇ ಆದ ಮಿಲಿಟರಿ ಪ್ರತಿಕ್ರಿಯೆಯನ್ನು ಪರಿಗಣಿಸುತ್ತಿದೆ ಎಂದು ವರದಿಗಳು ಸೂಚಿಸುತ್ತವೆ ಎಂದು ಸಹ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದು ದಾಳಿ ಮಾಡಲ್ಲ, ತಂಟೆಗೆ ಬಂದರೆ ಬಿಡಲ್ಲ

ಆಪರೇಷನ್ ಸಿಂಧೂರ್ ಒಂದು "ನಡೆಯುತ್ತಿರುವ ಕಾರ್ಯಾಚರಣೆ". ಭಾರತವು ಮತ್ತಷ್ಟು ದಾಳಿಗಳನ್ನು ನಡೆಸಬೇಕಾಗಿಲ್ಲ. ಆದರೆ ಪಾಕ್ ಪಡೆಗಳು ದಾಳಿ ಮಾಡಿದರೆ ಮತ್ತೆ ಪ್ರತಿದಾಳಿ ನಡೆಸುತ್ತದೆ ಎಂದು ಕೂಡ ಸಚಿವರು ಎಚ್ಚರಿಕೆ ನೀಡಿದರು.

ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸಲು ತನ್ನ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ವಿರೋಧ ಪಕ್ಷಗಳು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಭರವಸೆ ನೀಡಿದವು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಹೇಳಿದ್ದನ್ನು ನಾವು ಕೇಳಿದ್ದೇವೆ ... ಕೆಲವು ಮಾಹಿತಿಯನ್ನು ಗೌಪ್ಯವಾಗಿಡಬೇಕು ಎಂದು ಕೇಂದ್ರ ಸರ್ಕಾರದ ಸಚಿವರು ತಿಳಿಸಿದ್ದಾರೆ. ನಾವೆಲ್ಲರೂ ಸರ್ಕಾರದೊಂದಿಗಿದ್ದೇವೆ' ಎಂದು ಹೇಳಿದ್ದೇವೆ ಎಂದರು.

ಸರ್ವಪಕ್ಷಗಳ ಸಭೆಯನ್ನು ಸೌಹಾರ್ದಯುತ ರೀತಿಯಲ್ಲಿ ನಡೆಸಲಾಯಿತು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಬಗ್ಗೆ ಪ್ರತಿಕ್ರಿಯಿಸುತ್ತಾ, ಎಲ್ಲರೂ "ಪ್ರಬುದ್ಧತೆಯನ್ನು ತೋರಿಸಿದ್ದಾರೆ ಎಂದು ವರದಿಗಾರರಿಗೆ ತಿಳಿಸಿದರು. ಈ ಸಭೆಯು "ವಿಶಾಲ ರಾಜಕೀಯ ಒಮ್ಮತ" ಕ್ಕಾಗಿ ಉದ್ದೇಶಿಸಲಾಗಿತ್ತು, ಅದು ಪರಿಣಾಮವಾಗಿ ನೆರವೇರಿತು ಎಂದು ಹೇಳಿದರು.

ಆಪರೇಷನ್ ಸಿಂಧೂರ್ ನ್ನು SCALP ಕ್ಷಿಪಣಿ ಮತ್ತು ಹ್ಯಾಮರ್ ಬಾಂಬ್‌ನಂತಹ ನಿಖರ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಅಥವಾ ಪಿಒಕೆಯಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ 25 ನಿಮಿಷಗಳ ಏಕಕಾಲದಲ್ಲಿ ದಾಳಿ ನಡೆಸಲಾಯಿತು.

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪ್ರತಿದಿನ ಗಡಿಯಾಚೆಗಿನ ಗುಂಡಿನ ದಾಳಿಯನ್ನು ನಡೆಸುತ್ತಿದೆ. ಎಲ್‌ಒಸಿಯಾದ್ಯಂತ ಇರುವ ಉರಿ, ಕುಪ್ವಾರಾ, ಬಾರಾಮುಲ್ಲಾ ಮತ್ತು ಅಖ್ನೂರ್‌ನಂತಹ ವಲಯಗಳನ್ನು ಪಾಕ್ ಸೇನೆ ಗುರಿಯಾಗಿಸಿಕೊಂಡಿರುವುದರಿಂದ ಇಲ್ಲಿಯವರೆಗೆ ಒಬ್ಬ ಸೈನಿಕ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ. ಭಾರತೀಯ ಸೇನೆಯು ಪ್ರಮಾಣಾನುಗುಣ ಪ್ರತಿಕ್ರಿಯೆಯನ್ನು ನೀಡುತ್ತಿದೆ ಎಂದು ಸರ್ಕಾರ ಹೇಳಿದೆ.

Rajanath Singh
'ಆಪರೇಷನ್ ಸಿಂಧೂರ' ಬಳಿಕ ಸರ್ವಪಕ್ಷ ಸಭೆ: ಆಡಳಿತ-ವಿಪಕ್ಷ ನಾಯಕರು ಭಾಗಿ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com