
ನವದೆಹಲಿ: ಮೂರು ದಿನಗಳಿಂದ ನಡೆಯುತ್ತಿದ್ದ ಭಾರತ- ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ. ಆದರೆ ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿನಲ್ಲಿ ಯಾವುದೇ ರಾಜಿ ಇಲ್ಲ. ಅದು ಮುಂದುವರೆಯುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಹೇಳಿದ್ದಾರೆ..
ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ.
ಆದರೆ, ಭಾರತ ಯಾವುದೇ ಮಾದರಿಯ ಭಯೋತ್ಪಾದನೆ ಮತ್ತು ಸೂಚನೆಗಳ ವಿರುದ್ಧ ರಾಜಿಯಾಗದ ನಿಲುವನ್ನು ಸ್ಥಿರವಾಗಿ ನಿರ್ವಹಿಸುತ್ತಿದೆ. ಅದು ಮುಂದುವರಿಯುತ್ತದೆ ಎಂದು ಬರೆದುಕೊಂಡಿದ್ದಾರೆ.
ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನಗಳು 'ಸಂಪೂರ್ಣ ಮತ್ತು ತಕ್ಷಣದ' ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.
Advertisement