ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಒತ್ತಾಯ: ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಅಮಿತ್ ಶಾ, ಅರ್ಜುನ್ ರಾಮ್ ಮೇಘವಾಲ್

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ವಿಶೇಷ ಅಧಿವೇಶನಕ್ಕೆ ಒತ್ತಾಯಿಸುತ್ತಿವೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಆಪರೇಷನ್ ಸಿಂದೂರ್ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸುತ್ತಿವೆ.
Amit Shah and Arjun Ram Meghawal
ಅರ್ಜುನ್ ರಾಮ್ ಮೇಘವಾಲ್, ಅಮಿತ್ ಶಾ
Updated on

ನವದೆಹಲಿ: ಆಪರೇಷನ್ ಸಿಂದೂರ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ವಿರೋಧ ಪಕ್ಷಗಳಿಂದ ತೀವ್ರ ಬೇಡಿಕೆ ಬರುತ್ತಿರುವುದರ ಮಧ್ಯೆ, ಗೃಹ ಸಚಿವ ಅಮಿತ್ ಶಾ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.

ಈ ಸಭೆಯು ವಿಶೇಷ ಸದನ ಅಧಿವೇಶನ ಅಥವಾ ಸಂಪುಟ ಪುನಾರಚೆಯ ಸಾಧ್ಯತೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ವಿಶೇಷ ಅಧಿವೇಶನಕ್ಕೆ ಒತ್ತಾಯಿಸುತ್ತಿವೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಆಪರೇಷನ್ ಸಿಂದೂರ್ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸುತ್ತಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಪರೇಷನ್ ಸಿಂದೂರ್ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.

Amit Shah and Arjun Ram Meghawal
ಸಂಸತ್ ಅಧಿವೇಶನ ಕರೆಯುವಂತೆ ರಾಹುಲ್ ಗಾಂಧಿ ಒತ್ತಾಯ: ಸರ್ವಪಕ್ಷ ಸಭೆ ಬಳಿಕ ಖರ್ಗೆ

ಆದಾಗ್ಯೂ, ಮಳೆಗಾಲದ ಅಧಿವೇಶನಕ್ಕೂ ಮುನ್ನ ವಿಶೇಷ ಅಧಿವೇಶನ ಕರೆಯಲು ಸರ್ಕಾರ ಹಿಂಜರಿಯುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿರೋಧ ಪಕ್ಷದ ಬೇಡಿಕೆ ಅನಗತ್ಯವೆಂದು ತೋರುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳುತ್ತಾರೆ.

ಅಮಿತ್ ಶಾ ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರು ರಾಷ್ಟ್ರಪತಿಗಳೊಂದಿಗಿನ ಭೇಟಿಯ ಬಗ್ಗೆ ಕೇಳಿದಾಗ, ಚರ್ಚೆಯು ವಿವಿಧ ಕಾನೂನುಗಳು ಮತ್ತು ಸಂಭಾವ್ಯ ಸಂಪುಟ ಪುನಾರಚನೆ ಬಗ್ಗೆಯಾಗಿತ್ತು ಎಂದು ಮೂಲಗಳು ಹೇಳುತ್ತವೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com