ರಾಹುಲ್ ಗಾಂಧಿ, ಸೋನಿಯಾ ಗಾಂಧಿ
ದೇಶ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಮೇಲ್ನೋಟಕ್ಕೆ ಸಾಬೀತು: ನ್ಯಾಯಾಲಯಕ್ಕೆ ಇಡಿ ಹೇಳಿಕೆ
ಈ ಪ್ರಕರಣದಲ್ಲಿ ತನ್ನ ಆರೋಪಪಟ್ಟಿಯ ಪ್ರತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಒದಗಿಸುವಂತೆ ನ್ಯಾಯಾಧೀಶರು ಇಡಿಗೆ ಸೂಚಿಸಿದ್ದು, ಅವರ ಖಾಸಗಿ ದೂರಿನ ಆಧಾರದ ಮೇಲೆ ಇಡಿ ಪ್ರಸ್ತುತ ಪ್ರಕರಣವನ್ನು ದಾಖಲಿಸಿದೆ.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ 'ಪ್ರಾಥಮಿಕವಾಗಿ ಹಣ ವರ್ಗಾವಣೆ ಪ್ರಕರಣ' ದಾಖಲಾಗಿದೆ ಎಂದು ಜಾರಿ ನಿರ್ದೇಶನಾಲಯ ಬುಧವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.
ಈ ವಿಷಯವನ್ನು ಪರಿಗಣಿಸಬೇಕೆ ಬೇಡವೇ ಎಂಬ ಬಗ್ಗೆ ಆರಂಭಿಕ ಸಲ್ಲಿಕೆಗಳ ಸಂದರ್ಭದಲ್ಲಿ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರ ಮುಂದೆ ಇಡಿ ಹೇಳಿಕೆ ನೀಡಿತು.
ಈ ಪ್ರಕರಣದಲ್ಲಿ ತನ್ನ ಆರೋಪಪಟ್ಟಿಯ ಪ್ರತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಒದಗಿಸುವಂತೆ ನ್ಯಾಯಾಧೀಶರು ಇಡಿಗೆ ಸೂಚಿಸಿದ್ದು, ಅವರ ಖಾಸಗಿ ದೂರಿನ ಆಧಾರದ ಮೇಲೆ ಇಡಿ ಪ್ರಸ್ತುತ ಪ್ರಕರಣವನ್ನು ದಾಖಲಿಸಿದೆ.
2014ರ ಜೂನ್ 26ರಂದು ಸುಬ್ರಮಣಿ ಸ್ವಾಮಿಯವರು ಸಲ್ಲಿಸಿದ ಖಾಸಗಿ ದೂರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಪರಿಗಣನೆಗೆ ತೆಗೆದುಕೊಂಡ ನಂತರ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಸಿದ ಇಡಿ 2021ರಲ್ಲಿ ತನಿಖೆ ಆರಂಭಿಸಿತ್ತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ