'ED ಎಲ್ಲಾ ಮಿತಿಗಳನ್ನು ಮೀರಿದೆ': TASMAC ವಿರುದ್ಧ ಹಣ ವರ್ಗಾವಣೆ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಇಡಿಯ ಕ್ರಮಗಳು ಫೆಡರಲ್ ರಚನೆಯನ್ನು ಉಲ್ಲಂಘಿಸಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ, TASMAC ವಿರುದ್ಧದ ತನಿಖೆ ನಡೆಸುವುದಿಲ್ಲ ಎಂದು ಹೇಳಿದೆ.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ತಮಿಳುನಾಡು ಸರ್ಕಾರ ಸ್ವಾಮ್ಯದ ಮದ್ಯ ಚಿಲ್ಲರೆ ಉದ್ಯಮ ಟ್ಯಾಸ್ಮ್ಯಾಕ್ (TASMAC) ವಿರುದ್ಧ ಜಾರಿ ನಿರ್ದೇಶನಾಲಯ ನಡೆಸುತ್ತಿದ್ದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದ್ದು, ಪ್ರಕರಣ ವಿಚಾರಣೆಯಲ್ಲಿ ತನಿಖಾ ಸಂಸ್ಥೆ ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಛೀಮಾರಿ ಹಾಕಿದೆ.

ಸರ್ಕಾರಿ ಸ್ವಾಮ್ಯದ ಸಂಸ್ಥೆಯ ವಿರುದ್ಧ ಕ್ರಮ ಕೈಗೊಂಡು ನಂತರ ದಾಳಿ ಆರಂಭಿಸಿದ ಜಾರಿ ನಿರ್ದೇಶನಾಲಯ ಕ್ರಮವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ತೀವ್ರವಾಗಿ ಖಂಡಿಸಿತು.

ಇತ್ತೀಚಿನ ದಾಳಿಗಳನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಮತ್ತು ತಮಿಳುನಾಡು ರಾಜ್ಯ ಮಾರ್ಕೆಟಿಂಗ್ ಕಾರ್ಪೊರೇಷನ್ (TASMAC) ಸಲ್ಲಿಸಿದ ಅರ್ಜಿಗಳ ಮೇರೆಗೆ ನ್ಯಾಯಪೀಠವು ಇಡಿಗೆ ನೋಟಿಸ್ ನೀಡಿ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸದೆ ರಜೆಯ ನಂತರ ಮುಂದಿನ ವಿಚಾರಣೆಗೆ ನಿಗದಿಪಡಿಸಿತು.

Supreme court
ತಮಿಳುನಾಡಿನ ಎಲ್ಲ ಮದ್ಯದಂಗಡಿ ಬಂದ್ ಮಾಡಿ: ಮದ್ರಾಸ್ ಹೈಕೋರ್ಟ್ ಆದೇಶ, ಸುಪ್ರೀಂ ಮೆಟ್ಟಿಲೇರಲು ಮುಂದಾದ ಸರ್ಕಾರ

ಇಡಿಯ ಕ್ರಮಗಳು ಫೆಡರಲ್ ರಚನೆಯನ್ನು ಉಲ್ಲಂಘಿಸಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ, TASMAC ವಿರುದ್ಧದ ತನಿಖೆ ನಡೆಸುವುದಿಲ್ಲ ಎಂದು ಹೇಳಿದೆ.

2014 ರಿಂದ ಮದ್ಯದಂಗಡಿ ಪರವಾನಗಿಗಳ ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯವು 40 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಿದೆ. ತಸ್ಮಾಕ್ ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿ ವ್ಯವಸ್ಥಾಪಕ ನಿರ್ದೇಶಕರನ್ನು ವಶಕ್ಕೆ ಪಡೆದಿದೆ ಎಂದು ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಮಿತ್ ನಂದ್ ತಿವಾರಿ ಅವರು ಸಲ್ಲಿಸಿದ ಅರ್ಜಿಗಳನ್ನು ಪೀಠವು ಗಮನಿಸಿತು.

ಏಪ್ರಿಲ್ 6 ಮತ್ತು 8 ರ ನಡುವೆ TASMAC ಪ್ರಧಾನ ಕಚೇರಿ ಸೇರಿದಂತೆ ಇಡಿ ದಾಳಿಗಳ ವಿರುದ್ಧದ ತನ್ನ ಮತ್ತು ಟಾಸ್ಮಾಕ್ ಅರ್ಜಿಗಳನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com