ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ NITI Aayog ಸಭೆ: 'ಆಪರೇಷನ್ ಸಿಂಧೂರ್' ನಂತರ ಸಿಎಂಗಳ ಜೊತೆ ಚರ್ಚೆ

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಸ್ಥರನ್ನು ಸದಸ್ಯರನ್ನಾಗಿ ಹೊಂದಿರುವ ಆಡಳಿತ ಮಂಡಳಿಯ ಸಭೆಯು 'ಆಪರೇಷನ್ ಸಿಂದೂರ್' ನಂತರ ಮೊದಲ ಬಾರಿಗೆ ನಡೆಯಲಿದೆ.
PM Narendra Modi
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಶನಿವಾರ ನಡೆಯಲಿರುವ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯು, 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ರಾಜ್ಯಗಳ ಗುರಿಯನ್ನು ಕೇಂದ್ರೀಕರಿಸಿ ನಡೆಯಲಿದೆ. '2047ರಲ್ಲಿ ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ' ಎಂಬ ವಿಷಯದ ಅಡಿಯಲ್ಲಿ ಸಭೆ ನಡೆಯಲಿದೆ ಎಂದು ಅದು ತಿಳಿಸಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಸ್ಥರನ್ನು ಸದಸ್ಯರನ್ನಾಗಿ ಹೊಂದಿರುವ ಆಡಳಿತ ಮಂಡಳಿಯ ಸಭೆಯು 'ಆಪರೇಷನ್ ಸಿಂದೂರ್' ನಂತರ ಮೊದಲ ಬಾರಿಗೆ ನಡೆಯಲಿದೆ.

ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ ಎಂಬ ಕಲ್ಪನೆಯು ಸ್ಥಳೀಯ ವಾಸ್ತವಗಳಲ್ಲಿ ನೆಲೆಗೊಂಡಿರುವ ರಾಷ್ಟ್ರೀಯ ಆದ್ಯತೆಗಳೊಂದಿಗೆ ಹೊಂದಿಕೆಯಾಗುವ ದಿಟ್ಟ, ದೀರ್ಘಕಾಲೀನ ಮತ್ತು ಸಮಗ್ರ ದೃಷ್ಟಿಕೋನ ದಾಖಲೆಗಳನ್ನು ರೂಪಿಸಲು ರಾಜ್ಯಗಳಿಗೆ ಕರೆಯಾಗಿದೆ. ಈ ದೃಷ್ಟಿಕೋನಗಳು ಸಮಯಕ್ಕೆ ಅನುಗುಣವಾಗಿ ಗುರಿಗಳನ್ನು ಒಳಗೊಂಡಿರಬೇಕು ಎಂದು ಅದು ಹೇಳಿದೆ.

PM Narendra Modi
ಭಯೋತ್ಪಾದನೆಯಾಗಲಿ ಅಥವಾ ನಕ್ಸಲಿಸಂ ಆಗಿರಲಿ, ನಮ್ಮದು ಶೂನ್ಯ ಸಹಿಷ್ಣುತೆ: ಪ್ರಧಾನಿ ಮೋದಿ

ರಾಜ್ಯಗಳು ತಮ್ಮ ವಿಶಿಷ್ಟ ಭೌಗೋಳಿಕ ಮತ್ತು ಜನಸಂಖ್ಯಾ ಅನುಕೂಲಗಳನ್ನು ಬಳಸಿಕೊಳ್ಳಬೇಕು ಮತ್ತು ಮಾನವ ಅಭಿವೃದ್ಧಿ, ಆರ್ಥಿಕ ಬೆಳವಣಿಗೆ, ಸುಸ್ಥಿರತೆ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಗಳ ಮೇಲೆ ಕೇಂದ್ರೀಕರಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನೀತಿ ಆಯೋಗವು, ಆಡಳಿತ ಮಂಡಳಿಯ ಸಭೆಯು ಕೇಂದ್ರ ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರ ಎದುರಿಸುತ್ತಿರುವ ಅಭಿವೃದ್ಧಿ ಸವಾಲುಗಳ ಕುರಿತು ಚರ್ಚಿಸಲು ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ರಾಜ್ಯಗಳು ಹೇಗೆ ಪೂರಕವಾಗಿ ಕೆಲಸ ಮಾಡಬೇಕು ಎಂಬುದರ ಕುರಿತು ಒಮ್ಮತವನ್ನು ನಿರ್ಮಿಸಲು ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದೆ.

ಉದ್ಯಮಶೀಲತೆಯನ್ನು ಉತ್ತೇಜಿಸುವುದು, ಕೌಶಲ್ಯವನ್ನು ಹೆಚ್ಚಿಸುವುದು ಮತ್ತು ದೇಶಾದ್ಯಂತ ಸುಸ್ಥಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕ್ರಮಗಳನ್ನು ಸಹ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com