ಗಾಜಿಯಾಬಾದ್‌: ವಾಂಟೆಡ್ ಕ್ರಿಮಿನಲ್ ಬಂಧನ ವೇಳೆ ಗುಂಡಿನ ದಾಳಿ; ಕಾನ್‌ಸ್ಟೆಬಲ್ ಸಾವು, ನಾಲ್ವರು ಅಧಿಕಾರಿಗಳಿಗೆ ಗಾಯ

ಪೊಲೀಸ್ ವಕ್ತಾರರ ಪ್ರಕಾರ, ತಂಡವು ಖಾದಿರ್ ನನ್ನು ಯಶಸ್ವಿಯಾಗಿ ಪತ್ತೆಹಚ್ಚಿತು. ಆದರೆ ಖಾದಿರ್ ಮತ್ತು ಆತನ ಸಹಚರರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ, ಕಲ್ಲು ಎಸೆದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನೋಯ್ಡಾ: ಗಾಜಿಯಾಬಾದ್‌ನ ಮಸ್ಸೂರಿ ಪ್ರದೇಶದಲ್ಲಿ ತಡರಾತ್ರಿ ನಡೆದ ದಾಳಿಯಲ್ಲಿ ನೋಯ್ಡಾದ 32 ವರ್ಷದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತ ಕಾನ್‌ಸ್ಟೆಬಲ್ ಸೌರಭ್ ಅವರು, ನೋಯ್ಡಾದ ಹಂತ-III ಪೊಲೀಸ್ ಠಾಣೆಯ ತಂಡದಲ್ಲಿ ಒಬ್ಬರಾಗಿದ್ದರು. 16 ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದ ಅಪರಾಧಿ ಖಾದಿರ್ ನನ್ನು ಬಂಧಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಹಂತ-III ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ನಂತರ ಈ ಕಾರ್ಯಾಚರಣೆ ನಡೆದಿದೆ.

ಪೊಲೀಸ್ ವಕ್ತಾರರ ಪ್ರಕಾರ, ತಂಡವು ಖಾದಿರ್ ನನ್ನು ಯಶಸ್ವಿಯಾಗಿ ಪತ್ತೆಹಚ್ಚಿತು. ಆದರೆ ಖಾದಿರ್ ಮತ್ತು ಆತನ ಸಹಚರರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ, ಕಲ್ಲು ಎಸೆದಿದ್ದಾರೆ. ಈ ವೇಳೆ ಕಾನ್‌ಸ್ಟೆಬಲ್ ಸೌರಭ್ ತಲೆಗೆ ಗುಂಡು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಅಮೃತಸರದಲ್ಲಿ ಅಕಾಲಿ ದಳದ ಕೌನ್ಸಿಲರ್ ಗೆ ಗುಂಡಿಕ್ಕಿ ಹತ್ಯೆ

ಸೌರಭ್ ಅವರನ್ನು ತಕ್ಷಣ ಯಶೋದಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಹಂತ-III ಠಾಣೆಯಲ್ಲಿ ನಿಯೋಜಿಸಲಾಗಿದ್ದ ಸೌರಭ್ ಅವರು ಶಾಮ್ಲಿ ಮೂಲದವರು. ಘಟನೆಯಲ್ಲಿ ಸಬ್ ಇನ್ಸ್‌ಪೆಕ್ಟರ್‌ಗಳಾದ ಸಚಿನ್ ರಥಿ, ಉದಿತ್ ಸಿಂಗ್, ಸುಮಿತ್ ಮತ್ತು ನಿಖಿಲ್ ಗಾಯಗೊಂಡಿದ್ದಾರೆ.

ಪ್ರಸ್ತುತ ಬಂಧನದಲ್ಲಿರುವ ಖಾದಿರ್ ವಿರುದ್ಧ 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com