ಯೋಗಿ ರಾಜ್ಯದಲ್ಲಿ ವಿಕೃತಿಗಳಿಗೆ ಜಾಗ ಇಲ್ಲ: ಬುರ್ಖಾ ಧರಿಸಿದ ಮಹಿಳೆಗೆ ಮುತ್ತಿಟ್ಟ ಸುಹೇಲ್‌ಗೆ ಲಾಠಿ ರುಚಿ ತೋರಿಸಿದ ಪೊಲೀಸರು, Video!

ಮೇ 20ರಂದು ಉತ್ತರ ಪ್ರದೇಶದ ಮೀರತ್‌ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಅಹ್ಮದ್ ನಗರದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಬೈಕ್‌ನಲ್ಲಿ ಬಂದ ಯುವಕನೊಬ್ಬ ರಸ್ತೆ ಮಧ್ಯದಲ್ಲಿ ಮುತ್ತಿಕ್ಕಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಇಡೀ ವಿಷಯ ಈಗ ಬೆಳಕಿಗೆ ಬಂದಿದೆ.
ಸಿಸಿಟಿವಿ ದೃಶ್ಯಾವಳಿ
ಸಿಸಿಟಿವಿ ದೃಶ್ಯಾವಳಿ
Updated on

ಮೀರತ್: ಮೇ 20ರಂದು ಉತ್ತರ ಪ್ರದೇಶದ ಮೀರತ್‌ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಅಹ್ಮದ್ ನಗರದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಬೈಕ್‌ನಲ್ಲಿ ಬಂದ ಯುವಕನೊಬ್ಬ ರಸ್ತೆ ಮಧ್ಯದಲ್ಲಿ ಮುತ್ತಿಕ್ಕಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಇಡೀ ವಿಷಯ ಈಗ ಬೆಳಕಿಗೆ ಬಂದಿದೆ. ಮಹಿಳೆ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಮುಂಭಾಗದಿಂದ ಬಂದ ಯುವಕನೊಬ್ಬ ಇದ್ದಕ್ಕಿದ್ದಂತೆ ಮಹಿಳೆಗೆ ಬಲವಂತವಾಗಿ ಮುತ್ತಿಕ್ಕಿ ಪರಾರಿಯಾಗಿದ್ದನು ವೀಡಿಯೊದಲ್ಲಿ ಕಾಣಬಹುದು. ಈ ಕೃತ್ಯದಿಂದ ಮಹಿಳೆ ಆಘಾತಕ್ಕೊಳಗಾಗಿ ಯುವಕನನ್ನು ಹಿಡಿಯಲು ಪ್ರಯತ್ನಿಸುತ್ತಾಳೆ. ಆದರೆ ಸಾಧ್ಯವಾಗಲಿಲ್ಲ. ಇಡೀ ಘಟನೆಯು ಹತ್ತಿರದ ಮನೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ.

ವಿಡಿಯೋ ವೈರಲ್ ಆದ ನಂತರ, ಮೀರತ್ ಪೊಲೀಸರು ತಕ್ಷಣ ಕ್ರಮ ಕೈಗೊಂಡರು. ಅಹ್ಮದ್ ನಗರ ಪ್ರದೇಶದಲ್ಲಿ ಅಳವಡಿಸಲಾಗಿರುವ ಹಲವಾರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ, ಪೊಲೀಸರು ಆರೋಪಿಯ ಮನೆ ಪತ್ತೆ ಮಾಡಿ ಆರೋಪಿ ಸೊಹೈಲ್‌ ನನ್ನು ವಶಕ್ಕೆ ಪಡೆದರು. ವೈರಲ್ ವೀಡಿಯೊದ ಆಧಾರದ ಮೇಲೆ ಆರೋಪಿಯನ್ನು ಗುರುತಿಸಲಾಯಿತು.

ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆಯ ಸಮಯದಲ್ಲಿ, ಆರೋಪಿಯು ಆ ಮಹಿಳೆ ಯಾರು ಅಂತ ಗೊತ್ತಿಲ್ಲ. ಇದನ್ನು ಕೇವಲ 'ತಮಾಷೆ'ಗಾಗಿ ಮಾಡಿದ್ದೇನೆ ಎಂದು ಹೇಳಿದ್ದಾನೆ. ಪೊಲೀಸರು ಅವನನ್ನು ಕಟ್ಟುನಿಟ್ಟಾಗಿ ಪ್ರಶ್ನಿಸಿದಾಗ, ಅವನು ತನ್ನ ಕಿವಿಗಳನ್ನು ಹಿಡಿದುಕೊಂಡು ಕ್ಷಮೆಯಾಚಿಸಿ, ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದು ಹೇಳಿದನು. ಏತನ್ಮಧ್ಯೆ, ಆರೋಪಿಯು ಕ್ಷಮೆಯಾಚಿಸುವ ವೀಡಿಯೊ ಕೂಡ ಹೊರಬಂದಿದ್ದು, ಅದರಲ್ಲಿ ಇಬ್ಬರು ಪೊಲೀಸರ ಸಹಾಯದಿಂದ ಅವನು ತನ್ನ ಕಿವಿಗಳನ್ನು ಹಿಡಿದುಕೊಂಡು ಕ್ಷಮೆಯಾಚಿಸಿದ್ದಾನೆ. ಇನ್ನು ಮುಂದೆ ಅಂತಹ ತಪ್ಪು ಮಾಡುವುದಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾನೆ.

ಸಿಸಿಟಿವಿ ದೃಶ್ಯಾವಳಿ
ಗಾಜಿಯಾಬಾದ್‌: ವಾಂಟೆಡ್ ಕ್ರಿಮಿನಲ್ ಬಂಧನ ವೇಳೆ ಗುಂಡಿನ ದಾಳಿ; ಕಾನ್‌ಸ್ಟೆಬಲ್ ಸಾವು, ನಾಲ್ವರು ಅಧಿಕಾರಿಗಳಿಗೆ ಗಾಯ

ಸಂತ್ರಸ್ತ ಮಹಿಳೆಯನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವೀಡಿಯೊದಲ್ಲಿ ಆಕೆ ಬುರ್ಖಾ ಧರಿಸಿದ್ದರಿಂದ ಆಕೆ ಸುಳಿವು ಸಿಕ್ಕಿಲ್ಲ. ಆಕೆಗೆ ನ್ಯಾಯ ಸಿಗಲಿ ಎಂದು ಪೊಲೀಸರು ಆಕೆಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೋದ ಆಧಾರದ ಮೇಲೆ ಆರೋಪಿಯನ್ನು ಗುರುತಿಸಲಾಗಿದೆ ಎಂದು ಎಸ್‌ಎಸ್‌ಪಿ ಡಾ. ವಿಪಿನ್ ಕುಮಾರ್ ಟಾಡಾ ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com