ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ನಿಲ್ಲಲ್ಲ, ನಮಗೆ ಹಾನಿ ಮಾಡುವವರಿಗೆ ತಕ್ಕ ಉತ್ತರ ನೀಡಲಾಗುವುದು: ಅಮಿತ್ ಶಾ

ಶೆಲ್ ದಾಳಿಯ ಸಮಯದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸ್ಥಳೀಯ ಆಡಳಿತದ ತ್ವರಿತ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು.
ಅಮಿತ್ ಶಾ
ಅಮಿತ್ ಶಾ
Updated on

ಪೂಂಚ್/ಜಮ್ಮು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2014ರಲ್ಲಿ ಪ್ರಾರಂಭವಾದ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಇತ್ತೀಚಿನ ಪ್ರಚೋದನೆಗಳ ಹೊರತಾಗಿಯೂ ನಿಲ್ಲುವುದಿಲ್ಲ ಅಥವಾ ನಿಧಾನವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರತಿಪಾದಿಸಿದ್ದಾರೆ.

ಭಾರತಕ್ಕೆ ಹಾನಿ ಮಾಡಲು ಪ್ರಯತ್ನಿಸುವವ ಯಾರೇ ಆದರೂ ಅಂತವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಗಡಿ ಜಿಲ್ಲೆ ಪೂಂಚ್‌ನಲ್ಲಿ ಮಾತನಾಡಿದ ಶಾ, ಇತ್ತೀಚಿನ ಘಟನೆಗಳಿಂದಾಗಿ ಅಭಿವೃದ್ಧಿಯಲ್ಲಿ ಉಂಟಾದ ವಿರಾಮವು ಕೇವಲ ಕ್ಷಣಿಕವಾಗಿದೆ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರಗತಿ ಶೀಘ್ರದಲ್ಲೇ ತನ್ನ ವೇಗವನ್ನು ಮರಳಿ ಪಡೆಯುತ್ತದೆ ಎಂದು ಹೇಳಿದರು.

ಇತ್ತೀಚಿನ ಭಾರತ-ಪಾಕಿಸ್ತಾನ ಮಿಲಿಟರಿ ಸಂಘರ್ಷದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಹಿರಿಯ ಅಧಿಕಾರಿಯ ತ್ಯಾಗವನ್ನು ಗುರುತಿಸಿ, ಗೃಹ ಸಚಿವರು ಸಶಸ್ತ್ರ ಪಡೆಗಳು ಮತ್ತು ನಾಗರಿಕ ಆಡಳಿತದ ಧೈರ್ಯ ಮತ್ತು ಸನ್ನದ್ಧತೆಯನ್ನು ಶ್ಲಾಘಿಸಿದರು.

ಶೆಲ್ ದಾಳಿಯ ಸಮಯದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸ್ಥಳೀಯ ಆಡಳಿತದ ತ್ವರಿತ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com