ಕೇರಳದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ: NCBC ತೀವ್ರ ಆಕ್ರೋಶ!

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ OBC ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು NCBC ಶಿಫಾರಸು ಮಾಡಿದೆ ಎಂದು ಅವರು ಹೇಳಿದರು.
NCBC flags Kerala's OBC quota for Muslims, Christians
ಮುಸ್ಲಿಮ್, ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ, ಕೇರಳ ಸಿಎಂ ಪಿಣರಾಯಿ ವಿಜಯನ್online desk
Updated on

ನವದೆಹಲಿ: ಕೇರಳದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿಯನ್ನು ನೀಡಲಾಗಿದ್ದು, ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.

ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ (NCBC) ಕೇರಳ ಸರ್ಕಾರ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ OBC ಮೀಸಲಾತಿ ನೀಡುವ ಕ್ರಮವನ್ನು ಪ್ರಶ್ನಿಸಿದ್ದು, ಇದನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಕರೆದಿದೆ.

NCBC ಅಧ್ಯಕ್ಷ ಹನ್ಸ್ ರಾಜ್ ಅಹಿರ್, ಕೇರಳ ರಾಜ್ಯ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನಗಳನ್ನು ಈ ಗುಂಪುಗಳಿಗೆ ವಿಸ್ತರಿಸಲು ಯಾವ ಸಮೀಕ್ಷೆಯು ಆಧಾರವಾಗಿದೆ ಎಂಬುದನ್ನು ಸ್ಪಷ್ಟಪಡಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

NCBC flags Kerala's OBC quota for Muslims, Christians
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!

"OBC ಮೀಸಲಾತಿಯನ್ನು ಸಂಪೂರ್ಣವಾಗಿ ಧರ್ಮದ ಹೆಸರಿನಲ್ಲಿ ನೀಡಲಾಗುವುದಿಲ್ಲ. ಒಂದೇ ಧರ್ಮದೊಳಗಿನ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿದ ನಂತರವೇ ಅದನ್ನು ನೀಡಬೇಕು" ಎಂದು ಅವರು ಹೇಳಿದರು.

ಅಹಿರ್ ಇದನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಹೇಳಿದ್ದಾರೆ. ಆಯೋಗವು ಕೇರಳ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಮತ್ತು ಅದನ್ನು 15 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದು ಅವರು ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ OBC ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು NCBC ಶಿಫಾರಸು ಮಾಡಿದೆ ಎಂದು ಅವರು ಹೇಳಿದರು.

ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳನ್ನು ರಾಜ್ಯದ OBC ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಕೇರಳದಲ್ಲಿ ನಡೆಯುತ್ತಿರುವ ಚರ್ಚೆಗಳ ನಡುವೆ ಈ ಹೇಳಿಕೆಗಳು ಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com