ಕರ್ನಾಟಕದಂತೆ ಹರ್ಯಾಣ ಚುನಾವಣೆಯಲ್ಲೂ ಮತಕಳ್ಳತನ: ಬಿಹಾರ ಎಲೆಕ್ಷನ್ ಹೊತ್ತಲ್ಲಿ ರಾಹುಲ್ ಗಾಂಧಿ ಗಂಭೀರ ಆರೋಪ; Video

ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್‌ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು.
Rahul Gandhi addressing press conference in Delhi.
ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ
Updated on

ಚಂಡೀಗಢ: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಹೊತ್ತಿನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ "ಮತ ಕಳ್ಳತನ"ದ ಮತ್ತೊಂದು ಆರೋಪವನ್ನು ಮಾಡಿದ್ದಾರೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಗಂಭೀರ ಆಪಾದನೆ ಮಾಡಿದ್ದಾರೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅಮಾನ್ಯ ಮತದಾರರು ಮತ್ತು 19.26 ಲಕ್ಷ ಬೃಹತ್ ಮತದಾರರು ಸೇರಿದಂತೆ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ ಎಂದು ಹೇಳಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್‌ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು. ಒಂದೇ ಫೋಟೋ ಬಳಸಿ ಹತ್ತು ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ ಬ್ರೆಜಿಲ್ ಮಾದರಿಯ ಉದಾಹರಣೆಯನ್ನೂ ಅವರು ನೀಡಿದರು. ಇದಕ್ಕಾಗಿ ಚುನಾವಣಾ ಆಯೋಗವು ಸಿಸಿಟಿವಿ ದಾಖಲೆಗಳನ್ನು ನಾಶಪಡಿಸುತ್ತದೆ ಎಂದು ಅವರು ಆರೋಪಿಸಿದರು.

Rahul Gandhi addressing press conference in Delhi.
Bihar Polls: 'ಕೋತಿಗಳ ಗುಂಪಲ್ಲಿ ಕುಳಿತರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗುರುತೇ ಸಿಗುವುದಿಲ್ಲ'

ಕರ್ನಾಟಕದ ಆಳಂದ, ಮಹದೇವಪುರದಂತೆ ಹರಿಯಾಣದಲ್ಲಿ ಕೂಡ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಒಂದೇ ವ್ಯಕ್ತಿ ಹಲವು ಕಡೆ ಮತದಾನ ಮಾಡಿರುವ ನಿದರ್ಶನಗಳಿವೆ. ಅದರಲ್ಲೂ ಬ್ರೆಜಿಲ್ ಮಾಡೆಲ್ ಫೋಟೊ ಬಳಸಿ 10 ಬೂತ್​ಗಳಲ್ಲಿ 22 ಹೆಸರಿನಲ್ಲಿ ಮತದಾನ ನಡೆದಿತ್ತು ಎಂದು ಹೇಳಿದ್ದಾರೆ. ಹರ್ಯಾಣದಲ್ಲ 25 ಲಕ್ಷ ಮತಗಳ್ಳತನವಾಗಿದೆ ಎಂದು ದೂರಿದ್ದಾರೆ.

ನಕಲಿ ಮತದಾರರು

ಹರಿಯಾಣ ವಿಧಾನಸಭೆಯ ಚುನಾವಣಾ ಪಟ್ಟಿಯಲ್ಲಿ ನಕಲಿ ಫೋಟೋಗಳನ್ನು ಹೊಂದಿರುವ 1.24 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದರು. ನಾನು ಈ ಸಂದರ್ಭದಲ್ಲಿ ಚುನಾವಣಾ ಆಯೋಗವನ್ನು, ಭಾರತದಲ್ಲಿನ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದೇನೆ ಎಂದರು.

ನೂರಕ್ಕೆ ನೂರರಷ್ಟು ಸತ್ಯ

ಇಂದು ನಾನು ಮಾಡುತ್ತಿರುವ ಆರೋಪ ನೂರಕ್ಕೆ ನೂರರಷ್ಟು ಸತ್ಯ. ವಿರೋಧ ಪಕ್ಷದ ನಾಯಕನಾಗಿ ಸಂಪೂರ್ಣ ಜವಾಬ್ದಾರಿಯಿಂದ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದರು.

ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳ ಫಲಿತಾಂಶಗಳು ಹರಿಯಾಣ ಚುನಾವಣೆಯಲ್ಲಿನ ಇತರ ಮತಗಳಿಗಿಂತ ಭಿನ್ನವಾಗಿವೆ ಎಂದರು.

ಮತದಾನದ ಕೆಲವೇ ದಿನಗಳ ನಂತರ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರ ಪತ್ರಿಕಾಗೋಷ್ಠಿಯ ಕ್ಲಿಪ್ ರಾಹುಲ್ ಗಾಂಧಿ ತೋರಿಸಿದರು. ಹಲವಾರು ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್‌ಗೆ ಸ್ಪಷ್ಟ ಗೆಲುವು ಸಾಧಿಸುವ ಮುನ್ಸೂಚನೆ ನೀಡಿದ್ದರೂ ಸೈನಿ ಅವರು ಏಕೆ ಆತ್ಮವಿಶ್ವಾಸದಿಂದ ನಗುತ್ತಿರುವಂತೆ ಕಾಣಿಸಿಕೊಂಡರು ಎಂದು ಪ್ರಶ್ನಿಸಿದರು.

ಕಳೆದ ಸೆಪ್ಟೆಂಬರ್ 17 ರಂದು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಕರ್ನಾಟಕದ ಮಹಾದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸಿದ ಜನರ ತಾಂತ್ರಿಕ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸುವ ಮೂಲಕ ಸಿಇಸಿ ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿರುವವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದರು. ಚುನಾವಣಾ ಆಯೋಗ ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ತಳ್ಳಿಹಾಕಿತ್ತು.

Rahul Gandhi addressing press conference in Delhi.
SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com