ಹರಿಯಾಣದಲ್ಲೂ ಮತಗಳ್ಳತನ: ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

2024ರ ಅಕ್ಟೋಬರ್‌ನಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಮತ ಚಲಾಯಿಸಿದ ಮತದಾರರನ್ನು ಕಾಂಗ್ರೆಸ್‌ನ ಬೂತ್ ಏಜೆಂಟ್‌ಗಳು ಏಕೆ ಗುರುತಿಸಲಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಶ್ನಿಸಿದ್ದಾರೆ.
Rahul's claims on vote manipulation in Haryana unfounded: EC officials
ರಾಹುಲ್ ಗಾಂಧಿ
Updated on

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವು "ಆಧಾರರಹಿತ". ಏಕೆಂದರೆ ಹರಿಯಾಣದಲ್ಲಿ ಮತದಾರರ ಪಟ್ಟಿಯ ವಿರುದ್ಧ ಯಾವುದೇ ಮೇಲ್ಮನವಿಗಳು ದಾಖಲಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ

ಕರ್ನಾಟಕದಂತೆ ಹರಿಯಾಣ ಚುನಾವಣೆಯಲ್ಲೂ ಮತಕಳ್ಳತನ ನಡೆದಿದೆ. 25 ಲಕ್ಷ ಮತದಾರರು "ನಕಲಿ" ಮತ್ತು ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಚುನಾವಣಾ ಆಯೋಗದ ಅಧಿಕಾರಿಗಳು ಪ್ರತಿಕ್ರಿಯಿಸುತ್ತಿದ್ದಾರೆ.

2024ರ ಅಕ್ಟೋಬರ್‌ನಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಮತ ಚಲಾಯಿಸಿದ ಮತದಾರರನ್ನು ಕಾಂಗ್ರೆಸ್‌ನ ಬೂತ್ ಏಜೆಂಟ್‌ಗಳು ಏಕೆ ಗುರುತಿಸಲಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

Rahul's claims on vote manipulation in Haryana unfounded: EC officials
ಕರ್ನಾಟಕದಂತೆ ಹರ್ಯಾಣ ಚುನಾವಣೆಯಲ್ಲೂ ಮತಕಳ್ಳತನ: ಬಿಹಾರ ಎಲೆಕ್ಷನ್ ಹೊತ್ತಲ್ಲಿ ರಾಹುಲ್ ಗಾಂಧಿ ಗಂಭೀರ ಆರೋಪ; Video

"ಪರಿಷ್ಕರಣೆಯ ಸಮಯದಲ್ಲಿ ಕಾಂಗ್ರೆಸ್ ನ ಬೂತ್ ಮಟ್ಟದ ಏಜೆಂಟ್‌ಗಳು ಯಾವುದೇ ಅರ್ಜಿ ಮತ್ತು ಆಕ್ಷೇಪಣೆಗಳನ್ನು ಏಕೆ ಎತ್ತಲಿಲ್ಲ?" ಎಂದು ರಾಹುಲ್ ಗಾಂಧಿಯವರ ಆರೋಪಕ್ಕೆ ಚುನಾವಣಾ ಅಧಿಕಾರಿ ತಿರುಗೇಟು ನೀಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ಅಕ್ರಮಗಳನ್ನು ಗುರುತಿಸಲು ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟ್‌ಗಳು ಅಥವಾ BLA ಗಳನ್ನು ನೇಮಿಸುತ್ತವೆ.

ರಾಹುಲ್ ಗಾಂಧಿಯವರ ವಿರುದ್ಧ ಮತ್ತಷ್ಟು ದಾಳಿ ನಡೆಸಿದ EC ಅಧಿಕಾರಿಗಳು, ಮತದಾರರ ಪಟ್ಟಿಯ ವಿರುದ್ಧ "ಯಾವುದೇ ಮೇಲ್ಮನವಿ" ಸಲ್ಲಿಸಿಲ್ಲ ಮತ್ತು ಪ್ರಸ್ತುತ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಕೇವಲ 22 ಚುನಾವಣಾ ಅರ್ಜಿಗಳು ಬಾಕಿ ಇವೆ ಎಂದು ಒತ್ತಿ ಹೇಳಿದ್ದಾರೆ.

ಫಲಿತಾಂಶ ಘೋಷಣೆಯಾದ 45 ದಿನಗಳ ಒಳಗೆ ಆ ರಾಜ್ಯದ ಹೈಕೋರ್ಟ್‌ನಲ್ಲಿ ಚುನಾವಣಾ ಅರ್ಜಿ ಸಲ್ಲಿಸಬಹುದು.

Rahul's claims on vote manipulation in Haryana unfounded: EC officials
ಆಳಂದ ಮತಗಳ್ಳತನ ಪ್ರಕರಣ: ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್'ಗೆ ನಿರೀಕ್ಷಣಾ ಜಾಮೀನು ಮಂಜೂರು

"ಕಾಂಗ್ರೆಸ್ ನ ಮತಗಟ್ಟೆ ಏಜೆಂಟರು ಮತಗಟ್ಟೆಗಳಲ್ಲಿ ಏನು ಮಾಡುತ್ತಿದ್ದರು? ಮತದಾರ ಈಗಾಗಲೇ ಮತ ಚಲಾಯಿಸಿದ್ದರೆ ಅಥವಾ ಮತಗಟ್ಟೆ ಏಜೆಂಟರು ಮತದಾರರ ಗುರುತನ್ನು ಅನುಮಾನಿಸಿದರೆ ಅವರು ಆಕ್ಷೇಪಿಸಬೇಕು" ಎಂದು ಅಧಿಕಾರಿ ತಿಳಿಸಿದ್ದಾರೆ.

"ಬಿಹಾರದಲ್ಲಿ ಹಲವು ಹೆಸರುಗಳನ್ನು ತಪ್ಪಿಸಲು ನಡೆದ ಪರಿಷ್ಕರಣೆಯ ಸಮಯದಲ್ಲಿ ಕಾಂಗ್ರೆಸ್ ನ ಬಿಎಲ್‌ಎಗಳು ಯಾವುದೇ ಅರ್ಜಿಗಳನ್ನು ಮತ್ತು ಆಕ್ಷೇಪಣೆಗಳನ್ನು ಏಕೆ ಎತ್ತಲಿಲ್ಲ. ಹರಿಯಾಣದಲ್ಲಿ ಹಲವು ಹೆಸರುಗಳನ್ನು ತಪ್ಪಿಸಲು ನಡೆದ ಪರಿಷ್ಕರಣೆಯ ಸಮಯದಲ್ಲಿ ಐಎನ್‌ಸಿಯ ಬಿಎಲ್‌ಎಗಳು ಯಾವುದೇ ಅರ್ಜಿಗಳನ್ನು ಮತ್ತು ಆಕ್ಷೇಪಣೆಗಳನ್ನು ಏಕೆ ಎತ್ತಲಿಲ್ಲ" ಎಂದು ಅಧಿಕಾರಿ ವ್ಯಂಗ್ಯವಾಡಿದರು.

2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com