Sneh Rana
ಸ್ನೇಹ ರಾಣಾ

ಸ್ನೇಹ ರಾಣಾ ಜೊತೆ ಉತ್ತರಾಖಂಡ ಸಿಎಂ ಮಾತುಕತೆ; 50 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

ಬುಧವಾರ ರಾತ್ರಿ ಮುಖ್ಯಮಂತ್ರಿ ಧಾಮಿ ರಾಣಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವನ್ನು ಶ್ಲಾಘಿಸಿದರು.
Published on

ಡೆಹ್ರಾಡೂನ್: ಉತ್ತರಾಖಂಡದ ಹೆಣ್ಣುಮಕ್ಕಳು ದೇಶವನ್ನು ಹೇಗೆ ಹೆಮ್ಮೆಪಡುವಂತೆ ಮಾಡುತ್ತಿದ್ದಾರೆ ಎಂಬುದಕ್ಕೆ ಸ್ನೇಹ ರಾಣಾ ಒಂದು ಉಜ್ವಲ ಉದಾಹರಣೆ ಎಂದು ವಿಶ್ವಕಪ್ ಗೆಲುವಿನ ನಂತರ ಕ್ರಿಕೆಟ್ ಆಟಗಾರ್ತಿಯೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಹೇಳಿದ್ದಾರೆ ಮತ್ತು ರಾಣಾಗೆ 50 ಲಕ್ಷ ರೂ.ಗಳ ಅನುದಾನವನ್ನು ಘೋಷಿಸಿದ್ದಾರೆ.

ಬುಧವಾರ ರಾತ್ರಿ ಮುಖ್ಯಮಂತ್ರಿ ಧಾಮಿ ರಾಣಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವನ್ನು ಶ್ಲಾಘಿಸಿದರು.

'ಸ್ನೇಹಾ ರಾಣಾ ತಮ್ಮ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಪ್ರತಿಭೆಯ ಮೂಲಕ ವಿಶ್ವ ವೇದಿಕೆಯಲ್ಲಿ ಉತ್ತರಾಖಂಡಕ್ಕೆ ಕೀರ್ತಿ ತಂದಿದ್ದಾರೆ. ಅವರ ಯಶಸ್ಸು ನಮ್ಮ ಯುವ ಜನತೆಗೆ, ವಿಶೇಷವಾಗಿ ನಮ್ಮ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಿದೆ. ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಅತ್ಯುತ್ತಮ ಸೌಲಭ್ಯಗಳು ಮತ್ತು ಪ್ರೋತ್ಸಾಹವನ್ನು ಒದಗಿಸಲು ಬದ್ಧವಾಗಿದೆ' ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ ರಾಣಾ, ದೇಶ ಮತ್ತು ಉತ್ತರಾಖಂಡಕ್ಕೆ ಕೀರ್ತಿ ತರಲು ಶ್ರಮಿಸುವುದನ್ನು ಮುಂದುವರಿಸುವುದಾಗಿ ಹೇಳಿದರು.

ಭಾರತ ಮಹಿಳಾ ಕ್ರಿಕೆಟ್ ತಂಡವು ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ದೇಶಕ್ಕೆ ಮೊದಲ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ತಂದುಕೊಟ್ಟಿತು.

Sneh Rana
ನವದೆಹಲಿ: 'ವಿಶ್ವಕಪ್ ವಿಜೇತ' ಆಟಗಾರ್ತಿಯರ ಜೊತೆ ಪ್ರಧಾನಿ ಮೋದಿ ಸಂವಾದ; ದೀಪ್ತಿ ಶರ್ಮಾ 'ವಿಶೇಷ ಶಕ್ತಿ'ಯ ಗುಣಗಾನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com