ಬಿಹಾರದಲ್ಲೂ ಮತಗಳ್ಳತನ: ರಕ್ಷಿಸುವ ಹೊಣೆ ಹೊತ್ತವರಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ; ರಾಹುಲ್ ಗಾಂಧಿ ಆರೋಪ

ಸಂವಿಧಾನಕ್ಕೆ ದ್ರೋಹ ಮಾಡುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಚುನಾವಣಾ ಆಯುಕ್ತರಾದ ಸುಖ್‌ಬಿರ್‌ ಸಿಂಗ್‌ ಸಂಧು ಹಾಗೂ ವಿವೇಕ್‌ ಜೋಶಿ ಅವರೇ 'ಪ್ರಜಾಪ್ರಭುತ್ವದ ಕಗ್ಗೊಲೆ'ಯ ಪ್ರಮುಖ ದೋಷಿಗಳು ಎಂದು ದೂಷಿಸಿದ್ದಾರೆ.
Rahul Gandhi
ರಾಹುಲ್ ಗಾಂಧಿ
Updated on

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಮತಗಳ್ಳತನದ ವರದಿಯಾಗಿದೆ. ಹಲವು ರಾಜ್ಯಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದ ಬಿಜೆಪಿಯ ಕೆಲವು ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಹಾಕಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮತದಾನದ ಹಕ್ಕನ್ನು ರಕ್ಷಿಸುವ ಹೊಣೆ ಹೊತ್ತವರೇ (ಚುನಾವಣಾ ಆಯೋಗ) ಜನರ ಭವಿಷ್ಯವನ್ನು ಕದಿಯಲು ಪಾಲುದಾರಿಕೆ ವಹಿಸಿದ್ದಾರೆ. ಸಂವಿಧಾನಕ್ಕೆ ದ್ರೋಹ ಮಾಡುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಚುನಾವಣಾ ಆಯುಕ್ತರಾದ ಸುಖ್‌ಬಿರ್‌ ಸಿಂಗ್‌ ಸಂಧು ಹಾಗೂ ವಿವೇಕ್‌ ಜೋಶಿ ಅವರೇ 'ಪ್ರಜಾಪ್ರಭುತ್ವದ ಕಗ್ಗೊಲೆ'ಯ ಪ್ರಮುಖ ದೋಷಿಗಳು ಎಂದು ದೂಷಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್‌'ನಲ್ಲಿ ಹಿಂದಿಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಾಹುಲ್‌, ಪ್ರೀತಿಯ ಯುವ ಹಾಗೂ ಜೆನ್‌ ಝಿ ಸ್ನೇಹಿತರೇ, ಮತಗಳ್ಳತನದ ಮೂಲಕ ಹರಿಯಾಣದಲ್ಲಿ ಹೇಗೆ ಸರ್ಕಾರ ರಚಿಸಲಾಯಿತು, ಇಡೀ ರಾಜ್ಯದ ಸಾರ್ವಜನಿಕರ ಅಭಿಪ್ರಾಯವನ್ನು ಹೇಗೆ ಕಸಿಯಲಾಯಿತು ಎಂಬುದನ್ನು ನಿನ್ನೆಯಷ್ಟೇ ಸಾಕ್ಷಿ ಸಹಿತ ನಿಮ್ಮ ಮುಂದೆ ಇಟ್ಟಿದ್ದೆ.

ಸಮಗ್ರ ಪರಿಷ್ಕರಣೆಯ (ಎಸ್‌ಐಆರ್‌) ಮೂಲಕ ಮತದಾರರ ಪಟ್ಟಿಯನ್ನು ವ್ಯಾಪಕವಾಗಿ ತಿರುಚಲಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ದಿನಗಳ ಹಿಂದೆ ಬಿಹಾರದಲ್ಲಿ 'ವೋಟರ್‌ ಅಧಿಕಾರ ಯಾತ್ರೆ' ನಡೆಸಿದ್ದೆ. ಇಂದು, ಬಿಹಾರದ ಮೂಲೆ ಮೂಲೆಗಳಿಂದ ವರದಿಯಾಗಿರುವ ಸುದ್ದಿಗಳು, ವಿಡಿಯೊಗಳು ಮತಗಳ್ಳತನದ ಸಾಕ್ಷ್ಯಗಳನ್ನು ಮತ್ತಷ್ಟು ಬಲಪಡಿಸಿವೆ' ಎಂದಿದ್ದಾರೆ.

Rahul Gandhi
ಹರಿಯಾಣ ಮತಗಳ್ಳತನ ಆರೋಪ; 'ಜನರ ವಂಚಿಸಲು ನನ್ನ ಹೆಸರು ಬಳಕೆ'; ರಾಹುಲ್ ಉಲ್ಲೇಖಿಸಿದ್ದ ಬ್ರೆಜಿಲ್ ಮಾಡೆಲ್ ಲಾರಿಸ್ಸಾ ಸ್ಪಷ್ಟನೆ! Video

ಲಕ್ಷಾಂತರ ಮತದಾರರನ್ನು ಈಗಾಗಲೇ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದೀಗ, ಜನರು ತಮ್ಮ ಹಕ್ಕು ಚಲಾಯಿಸದಂತೆ ಮತಗಟ್ಟೆಗಳ ಬಳಿ ತಡೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತಗಳ್ಳತನದ ಮೂಲಕ ರಚನೆಯಾದ ಸರ್ಕಾರ ಯುವಕರು, ಜೆನ್‌ ಝಿ, ಸಾರ್ವಜನಿಕರ ಹಿತದೃಷ್ಟಿಯಿಂದ ಎಂದಿಗೂ ಕೆಲಸ ಮಾಡುವುದಿಲ್ಲ ಎಂಬುದು ನೆನಪಿರಲಿ ಎಂದು ಹೇಳಿದ್ದಾರೆ.

ಜ್ಞಾನೇಶ್‌ ಕುಮಾರ್‌, ಸುಖ್‌ಬಿರ್‌ ಸಿಂಗ್‌ ಸಂಧು ಹಾಗೂ ವಿವೇಕ್‌ ಜೋಶಿ ಅವರು ಪ್ರಜಾಪ್ರಭುತ್ವದ ಕಗ್ಗೊಲೆಯ ಪ್ರಮುಖ ಅಪರಾಧಿಗಳು. ಇವರು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳಾಗಿದ್ದರೂ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರುದ್ಧ ದೊಡ್ಡ ಪ್ರಮಾಣದ ದ್ರೋಹವೆಸಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com