ಬಿಹಾರ ಚುನಾವಣೆ: ತೇಜ್ ಪ್ರತಾಪ್‌ಗೆ ಜೀವ ಬೆದರಿಕೆ; ಭದ್ರತೆ ಹೆಚ್ಚಳ

"ನನ್ನ ಜೀವಕ್ಕೆ ಬೆದರಿಕೆ ಇರುವುದರಿಂದ ನನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ನನ್ನನ್ನು ಕೊಲ್ಲಲು ಅನೇಕ ಶತ್ರುಗಳು ಕೆಲಸ ಮಾಡುತ್ತಿದ್ದಾರೆ" ಎಂದು ಯಾದವ್ ಪಾಟ್ನಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
Tej Pratap Yadav
ತೇಜ್ ಪ್ರತಾಪ್ ಯಾದವ್
Updated on

ಪಾಟ್ನಾ: ಜನಶಕ್ತಿ ಜನತಾ ದಳದ ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್ ಅವರಿಗೆ ಜೀವ ಬೆದರಿಕೆ ಇದೆ ಎಂಬ ಆರೋಪದ ನಂತರ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. "ತಮ್ಮನ್ನು ಕೊಲ್ಲಲು ಪ್ರಯತ್ನಿಸುತ್ತಿರುವ ಅನೇಕ ಶತ್ರುಗಳಿದ್ದಾರೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

"ನನ್ನ ಜೀವಕ್ಕೆ ಬೆದರಿಕೆ ಇರುವುದರಿಂದ ನನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ನನ್ನನ್ನು ಕೊಲ್ಲಲು ಅನೇಕ ಶತ್ರುಗಳು ಕೆಲಸ ಮಾಡುತ್ತಿದ್ದಾರೆ" ಎಂದು ಯಾದವ್ ಪಾಟ್ನಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತೇಜ್ ಪ್ರತಾಪ್ ಅವರು ತಮ್ಮ ಸಹೋದರ ತೇಜಸ್ವಿ ಯಾದವ್ ಅವರ 36ನೇ ಹುಟ್ಟುಹಬ್ಬದಂದು ಅವರಿಗೆ ಶುಭ ಕೋರಿದರು ಮತ್ತು ಅವರಿಗೆ ಉತ್ತಮ ಆರೋಗ್ಯ ಮತ್ತು ಉಜ್ವಲ ಭವಿಷ್ಯ ನೀಡಲು ಎಂದು ಹಾರೈಸಿದರು.

Tej Pratap Yadav
ಬಿಹಾರ ಚುನಾವಣೆ 2025: ಮತದಾರರಿಗೆ ಹಂಚಲು ತಂದಿದ್ದ ಮದ್ಯದ ಬಾಕ್ಸ್ ಲೂಟಿ ಮಾಡಿದ ಗ್ರಾಮಸ್ಥರು! Video

"ಇಂದು ತೇಜಸ್ವಿಯವರ ಹುಟ್ಟುಹಬ್ಬ ಮತ್ತು ನಾನು ಅವರಿಗೆ ನನ್ನ ಶುಭಾಶಯಗಳನ್ನು ಕೋರುತ್ತೇನೆ. ಅವರಿಗೆ ಉಜ್ವಲ ಭವಿಷ್ಯ ನೀಡಲಿ ಎಂದು ಆಶಿಸುತ್ತೇನೆ. ಅವರಿಗೆ ನನ್ನ ಆಶೀರ್ವಾದವಿದೆ" ಎಂದು ಅವರು ಹೇಳಿದರು.

ನವೆಂಬರ್ 6 ರಂದು ಮೊದಲ ಹಂತದಲ್ಲಿ ಮತದಾನ ನಡೆದ ಮಹುವಾ ಕ್ಷೇತ್ರದಲ್ಲಿ ತೇಜ್ ಪ್ರತಾಪ್ ಯಾದವ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com