Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

ರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು.
PM Modi meeting
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Updated on

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಕಾರು ಸ್ಫೋಟಗೊಂಡು 10ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಕಾರು ಛಿದ್ರಗೊಂಡು ಹಲವಾರು ವಾಹನಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PM Modi meeting
Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 13 ಸಾವು, 17 ಜನರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ, Video!

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ ಮತ್ತು ಇದು ಉಗ್ರರ ಕೃತ್ಯ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com