ಬಿಹಾರ: ಭರ್ಜರಿ ಗೆಲುವಿನ ಮರುದಿನವೇ ಬಿಜೆಪಿಯಿಂದ ಆರ್.ಕೆ ಸಿಂಗ್ ಅಮಾನತು!

ರಾಜ್ಯದ ಬಿಜೆಪಿ ಪ್ರಧಾನ ಕಚೇರಿಯಿಂದ ಅಮಾನತು ಆದೇಶ ಪಡೆದಿರುವ ಸಿಂಗ್ ಅವರಿಗೆ, ಪಕ್ಷದಿಂದ ಏಕೆ ಉಚ್ಛಾಟಿಸಬಾರದು ಎಂಬುದಕ್ಕೆ ಕಾರಣ ನೀಡುವಂತೆ ಸೂಚಿಸಲಾಗಿದೆ.
Day after Bihar win, BJP suspends ex-MP RK Singh
ಬಿಜೆಪಿ ನಾಯಕ ಆರ್.ಕೆ. ಸಿಂಗ್
Updated on

ಪಾಟ್ನಾ: ಬಿಹಾರದಲ್ಲಿ ಆಡಳಿತಾರೂಢ ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿ ಸುದ್ದಿಯಲ್ಲಿರುವ ಮಾಜಿ ಕೇಂದ್ರ ಸಚಿವ ರಾಜ್ ಕುಮಾರ್ ಸಿಂಗ್ ಅವರನ್ನು "ಪಕ್ಷ ವಿರೋಧಿ" ಚಟುವಟಿಕೆ ಆರೋಪದ ಮೇಲೆ ಶನಿವಾರ ಬಿಜೆಪಿಯಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ರಾಜ್ಯದ ಬಿಜೆಪಿ ಪ್ರಧಾನ ಕಚೇರಿಯಿಂದ ಅಮಾನತು ಆದೇಶ ಪಡೆದಿರುವ ಸಿಂಗ್ ಅವರಿಗೆ, ಪಕ್ಷದಿಂದ ಏಕೆ ಉಚ್ಛಾಟಿಸಬಾರದು ಎಂಬುದಕ್ಕೆ ಕಾರಣ ನೀಡುವಂತೆ ಸೂಚಿಸಲಾಗಿದೆ.

ಇದೇ ರೀತಿಯ ಕ್ರಮದಲ್ಲಿ, ಪಕ್ಷವು ಎಂಎಲ್‌ಸಿ ಅಶೋಕ್ ಕುಮಾರ್ ಅಗರ್ವಾಲ್ ಮತ್ತು ಅವರ ಪತ್ನಿ, ಕತಿಹಾರ್ ಮೇಯರ್ ಉಷಾ ಅಗರ್ವಾಲ್ ಅವರನ್ನು ಸಹ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

Day after Bihar win, BJP suspends ex-MP RK Singh
ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!

ಕಾತಿಹಾರ್ ವಿಧಾನಸಭಾ ಕ್ಷೇತ್ರದಿಂದ ವಿಕಾಸಶೀಲ ಇನ್ಸಾನ್ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ತಮ್ಮ ಮಗ ಸೌರಭ್ ಪರವಾಗಿ ಅಗರ್ವಾಲ್ ದಂಪತಿ, ಬಿಜೆಪಿ ಶಾಸಕ ಮತ್ತು ಮಾಜಿ ಉಪಮುಖ್ಯಮಂತ್ರಿ ತರ್ಕಿಶೋರ್ ಪ್ರಸಾದ್ ವಿರುದ್ಧ ಪ್ರಚಾರ ಮಾಡಿದ್ದರು.

ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನಿವೃತ್ತರಾದ ಕೆಲವು ತಿಂಗಳುಗಳ ನಂತರ 2014 ರಲ್ಲಿ ಬಿಜೆಪಿ ಸೇರಿದ್ದ ಆರ್.ಕೆ. ಸಿಂಗ್, ಬಿಹಾರ ಉಪಮುಖ್ಯಮಂತ್ರಿ ಮತ್ತು ಮಾಜಿ ರಾಜ್ಯ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿಯಂತಹ ನಾಯಕರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಟೀಕಿಸಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಅವರು ತಮ್ಮ ಅರಾ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ವಿಫಲರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com