'ಸಂಪುಟ ಪುನಾರಚನೆ ಬಗ್ಗೆ ಚರ್ಚೆಯೇ ಆಗಿಲ್ಲ, ರಾಹುಲ್ ಗಾಂಧಿಯವರಿಗೆ ಧೈರ್ಯ ತುಂಬಿದ್ದೇನೆ': ಸಿದ್ದರಾಮಯ್ಯ

ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ. ನಾನು ಮೋದಿಯವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
Siddaramaiah
ಸಿದ್ದರಾಮಯ್ಯ
Updated on

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನ ಮೈತ್ರಿಕೂಟ ಹೀನಾಯವಾಗಿ ಸೋತಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಭೇಟಿ ನೀಡಿದ್ದು ಅವರ ಸಿಎಂ ಹುದ್ದೆಗೆ ಯಾವುದೇ ತೊಂದರೆಯಾಗುವುದಿಲ್ಲ. ಬದಲಿಗೆ ಸಚಿವ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಿತು ಎನ್ನಲಾಗಿದೆ.

ತಮ್ಮ ಭೇಟಿ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ರಾಹುಲ್ ಗಾಂಧಿಯವರ ಜೊತೆ ಸಚಿವ ಸಂಪುಟದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ರಾಹುಲ್ ಗಾಂಧಿಯವರ ಭೇಟಿ ವೇಳೆ ಬಿಹಾರದ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಾಗಿದೆ. ಫಲಿತಾಂಶದಿಂದ ರಾಹುಲ್ ಗಾಂಧಿ ಬೇಸರಗೊಂಡಿದ್ದರು. ಹೀಗಾಗಿ, ನಾವು ನಿಮ್ಮ ಜೊತೆ ಇದ್ದೇವೆ ಎಂದು ರಾಹುಲ್ ಗಾಂಧಿಗೆ ಧೈರ್ಯ ತುಂಬಿ ಬಂದಿದ್ದೇನೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ. ನಾನು ಮೋದಿಯವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.

Siddaramaiah
ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; 8-12 ಸಚಿವರಿಗೆ ಕೊಕ್? ಆಕಾಂಕ್ಷಿಗಳ ಪಟ್ಟಿ!

ಸಂಪುಟ ಪುನಾರಚನೆ ಬಗ್ಗೆ ಚರ್ಚೆಯೇ ಆಗಿಲ್ಲ

ನಾನು ರಾಹುಲ್ ಗಾಂಧಿಯನ್ನು ಭೇಟಿಯಾದೆ. ನಾವು ಬಿಹಾರ ಚುನಾವಣೆಯ ಬಗ್ಗೆ ಮಾತ್ರ ಚರ್ಚಿಸಿದೆವು. ಅವರು ನಮ್ಮ ನಾಯಕ, ಆದ್ದರಿಂದ ಬಿಹಾರ ಚುನಾವಣೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ನಾವು ಅವರನ್ನು ಪ್ರೋತ್ಸಾಹಿಸಿದೆವು. ಅವರು ಅದರ ಬಗ್ಗೆ ಚಿಂತಿಸುವುದಿಲ್ಲ ಎಂದು ಹೇಳಿದರು. ನಾವು ಅವರಿಗೆ ಉತ್ಸಾಹ ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇವೆ. ಸಂಪುಟ ಪುನಾರಚನೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.ನಾನು ಸೋಮವಾರ ಪ್ರಧಾನಿಯನ್ನು ಭೇಟಿ ಮಾಡುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತೇ ಅಂತಿಮ ಎಂದು ಹೇಳಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಊಹಾಪೋಹಗಳ ನಡುವೆ ಸಿಎಂ ಹೇಳುವುದನ್ನು ಪಾಲಿಸುವುದಾಗಿ ಕಳೆದ ತಿಂಗಳು ಹೇಳಿದ್ದರು.

ಮುಖ್ಯಮಂತ್ರಿ ಹೇಳಿಕೆಯ ನಂತರ ಏನು ಹೇಳುವುದು ಉಳಿದಿದೆ? ನಾವು ಅವರ ಮಾತನ್ನು ಪಾಲಿಸುತ್ತೇವೆ ಎಂದು ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರೆ ಪೂರ್ಣ ಅವಧಿಯನ್ನು ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಕೇಳಿದಾಗ ಶಿವಕುಮಾರ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com