ಸೌದಿಯಲ್ಲಿ ಘೋರ ಘಟನೆ: ಒಂದೇ ಕುಟುಂಬದ 18 ಮಂದಿ ಸೇರಿ 45 ಮಂದಿ ಸಜೀವದಹನ, ಭಾರತದಿಂದ ತೆರಳಿದ 50 ಸಂಬಂಧಿಕರು!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಒಂದೇ ಕುಟುಂಬದ 18 ಮಂದಿ ಸೇರಿ 45 ಮಂದಿ ಭಾರತೀಯ ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ಯಾತ್ರಾರ್ಥಿಗಳ ಸುಮಾರು 50 ಸಂಬಂಧಿಕರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಭಾರತದಿಂದ ಗಲ್ಫ್ ದೇಶಕ್ಕೆ ತೆರಳಿದ್ದಾರೆ...
ಸೌದಿಯಲ್ಲಿ ಮೃತಪಟ್ಟ ಭಾರತೀಯ ಹಜ್ ಯಾತ್ರಾರ್ಥಿಗಳು
ಸೌದಿಯಲ್ಲಿ ಮೃತಪಟ್ಟ ಭಾರತೀಯ ಹಜ್ ಯಾತ್ರಾರ್ಥಿಗಳು
Updated on

ಹೈದರಾಬಾದ್: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಒಂದೇ ಕುಟುಂಬದ 18 ಮಂದಿ ಸೇರಿ 45 ಮಂದಿ ಭಾರತೀಯ ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ಯಾತ್ರಾರ್ಥಿಗಳ ಸುಮಾರು 50 ಸಂಬಂಧಿಕರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಭಾರತದಿಂದ ಗಲ್ಫ್ ದೇಶಕ್ಕೆ ತೆರಳಿದ್ದಾರೆ ಎಂದು ತೆಲಂಗಾಣದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ಅಂತ್ಯಕ್ರಿಯೆ ನಡೆಯುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಂತ್ಯಕ್ರಿಯೆ ವ್ಯವಸ್ಥೆ ಸೇರಿದಂತೆ ಪರಿಹಾರ ಕಾರ್ಯಾಚರಣೆಗಳನ್ನು ಸಂಘಟಿಸಲು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮೊಹಮ್ಮದ್ ಅಜರುದ್ದೀನ್ ನೇತೃತ್ವದ ತೆಲಂಗಾಣ ಸರ್ಕಾರಿ ತಂಡವು ಸೌದಿ ಅರೇಬಿಯಾವನ್ನು ತಲುಪಿದೆ. ಗುರುತಿಸಲಾಗದಷ್ಟು ಸುಟ್ಟುಹೋದ ಶವಗಳನ್ನು ಸಂರಕ್ಷಿಸಲಾಗಿದೆ. ಮರಣ ಪ್ರಮಾಣಪತ್ರಕ್ಕಾಗಿ ಡಿಎನ್‌ಎ ಪರೀಕ್ಷೆಯನ್ನು ನಡೆಸಲಾಗುತ್ತದೆ. ಡಿಎನ್‌ಎ ಮಾದರಿ ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಕುಟುಂಬ ಸದಸ್ಯರೊಂದಿಗೆ ಹೊಂದಾಣಿಕೆಯಾದ ನಂತರವೇ ಮರಣ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ ಎಂದು ಅಧಿಕಾರಿ ಹೇಳಿದರು.

ತೆಲಂಗಾಣ ಸರ್ಕಾರದ ಜೊತೆಗೆ, ಸೌದಿ ಸರ್ಕಾರವು ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ಘೋಷಿಸಬಹುದು. ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಲು ಡಿಎನ್‌ಎ ಹೊಂದಾಣಿಕೆ ಅತ್ಯಗತ್ಯ ಎಂದು ಅವರು ಹೇಳಿದರು. ತೆಲಂಗಾಣ ಸರ್ಕಾರದ ಕಂದಾಯ ಇಲಾಖೆಯು ಕುಟುಂಬ ಸದಸ್ಯರಿಗೆ ಸಂಬಂಧಿತ ದಾಖಲೆಗಳನ್ನು ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು. ಇನ್ನು ಎಲ್ಲರನ್ನೂ ಸಾಮೂಹಿಕ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸೌದಿಯಲ್ಲಿ ಮೃತಪಟ್ಟ ಭಾರತೀಯ ಹಜ್ ಯಾತ್ರಾರ್ಥಿಗಳು
ಸೌದಿ ಬಸ್‌ ದುರಂತ: ಬೆಂಕಿಯಲ್ಲಿ ಬೆಂದು ಹೋದವು ಒಂದೇ ಕುಟುಂಬದ ಮೂರು ತಲೆಮಾರಿನ 18 ಜೀವಗಳು!

ಮೃತರ ಕುಟುಂಬದಿಂದ ಇಬ್ಬರು ಸದಸ್ಯರನ್ನು ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗುತ್ತದೆ ಎಂದು ತೆಲಂಗಾಣ ಸರ್ಕಾರ ತಿಳಿಸಿತ್ತು. ಈ ವಿಷಯದ ಬಗ್ಗೆ ತಿಳಿದಿರುವ ಜನರ ಪ್ರಕಾರ, ಬಸ್ ಅಪಘಾತದಲ್ಲಿ 42 ಯಾತ್ರಿಕರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ತೆಲಂಗಾಣದವರು. ಆದಾಗ್ಯೂ, ಹೈದರಾಬಾದ್ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್ ಅವರು, ಸಾವಿನ ಸಂಖ್ಯೆ 45 ಎಂದು ಹೇಳಿದ್ದಾರೆ. ಸೌದಿ ಅರೇಬಿಯಾದಲ್ಲಿ ಧಾರ್ಮಿಕ ಸಂಪ್ರದಾಯಗಳ ಪ್ರಕಾರ ಮೃತರ ಅಂತ್ಯಕ್ರಿಯೆ ನಡೆಸಲು ಮತ್ತು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com