ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುವ ಮೂಲಕ 'ದುರಾಸೆಯ ವ್ಯಕ್ತಿ' ಅನ್ನಿಸಿಕೊಳ್ಳಲು ಬಯಸಲ್ಲ: ಚಿರಾಗ್ ಪಾಸ್ವಾನ್

ಬಿಹಾರವನ್ನು ಮೀರಿ 'ಎನ್‌ಡಿಎ ಪಾಲುದಾರ'ನಾಗಿ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಬಯಸುತ್ತೇನೆ ಎಂದು ಹೇಳಿದರು.
Chirag Paswan
ಚಿರಾಗ್ ಪಾಸ್ವಾನ್
Updated on

ಪಾಟ್ನಾ: ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುವ ಮೂಲಕ 'ದುರಾಸೆಯ ವ್ಯಕ್ತಿ' ಎಂದು ಬಿಂಬಿಸಿಕೊಳ್ಳಲು ಬಯಸುವುದಿಲ್ಲ ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ಬಿಹಾರದ ಹೊಸ ಸಚಿವ ಸಂಪುಟದಲ್ಲಿ ತಮ್ಮ ಲೋಕ ಜನಶಕ್ತಿ ಪಕ್ಷಕ್ಕೆ (ರಾಮ್ ವಿಲಾಸ್) ಎರಡು ಸ್ಥಾನಗಳನ್ನು ಹಂಚಿಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಸ್ವಾನ್, ಬಿಹಾರವನ್ನು ಮೀರಿ 'ಎನ್‌ಡಿಎ ಪಾಲುದಾರ'ನಾಗಿ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಬಯಸುತ್ತೇನೆ ಎಂದು ಹೇಳಿದರು.

ಎನ್‌ಡಿಎಯೊಳಗಿನ ಸೀಟು ಹಂಚಿಕೆ ವ್ಯವಸ್ಥೆಗಳ ಭಾಗವಾಗಿ ನಮಗೆ ನೀಡಲಾದ 29 ಸ್ಥಾನಗಳಲ್ಲಿ ನಮ್ಮ ಪಕ್ಷವು 19 ಕ್ಷೇತ್ರಗಳಲ್ಲಿ ಗೆದ್ದಿದೆ. ಮೈತ್ರಿಕೂಟಕ್ಕೆ ದುರ್ಬಲವೆಂದು ಪರಿಗಣಿಸಲಾದ ಸ್ಥಾನಗಳಲ್ಲಿ ನಾವು ಸ್ಪರ್ಧಿಸಿದ್ದೇವೆ. ಜನರ ಆಶೀರ್ವಾದ ಮತ್ತು ನಮ್ಮ ಪಕ್ಷಕ್ಕೆ ಪ್ರಧಾನಿಯವರ ಬೆಂಬಲದಿಂದಾಗಿ ಇದು ಸಾಧ್ಯವಾಯಿತು. ಈಗ, ಬಿಹಾರದ ಹೊಸ ಸಂಪುಟದಲ್ಲಿ ಎಲ್‌ಜೆಪಿ (ಆರ್‌ವಿ)ಗೆ ಎರಡು ಸ್ಥಾನ ನೀಡಲಾಗಿದೆ. ಇಷ್ಟು ಸಾಕು. ಚಿರಾಗ್ ಪಾಸ್ವಾನ್ ಇನ್ನೆಷ್ಟು ದುರಾಸೆಯಿಂದ ಕೂಡಿರಬಹುದು? ಎಂದು ಕೇಂದ್ರ ಸಚಿವರು ಹೇಳಿದರು.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 202 ಸ್ಥಾನಗಳನ್ನು ಗೆದ್ದು ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗಳಿಸಿವೆ.

Chirag Paswan
ಬಿಹಾರ ಸಿಎಂ ಗಾದಿಯಲ್ಲಿ ಮುಂದುವರೆಯುತ್ತಾರಾ ನಿತೀಶ್ ಕುಮಾರ್?: ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ ಹೇಳಿದ್ದೇನು?

'2021ರಲ್ಲಿ, ನನ್ನ ಸುತ್ತಲೂ ಒಬ್ಬ ವ್ಯಕ್ತಿಯೂ ಇರಲಿಲ್ಲ. ನನ್ನ ಪಕ್ಷ ವಿಭಜನೆಯಾಯಿತು. ಮತ್ತು 2024 ರಲ್ಲಿ, ಪ್ರಧಾನಿ ನಮ್ಮ ಪಕ್ಷದ ಮೇಲೆ ನಂಬಿಕೆ ಇಟ್ಟು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಮಗೆ ಐದು ಸ್ಥಾನಗಳನ್ನು ನೀಡಿದರು. ನಾವು ಎಲ್ಲ ಐದು ಸ್ಥಾನಗಳನ್ನು ಗೆದ್ದಿದ್ದೇವೆ. ನಾನು ಈಗ ಮೈತ್ರಿಕೂಟದಿಂದ ಹೆಚ್ಚಿನದನ್ನು ಕೇಳಿದರೆ, ಯಾರೂ ನನ್ನಷ್ಟು ದುರಾಸೆಯವರಾಗಿರುವುದಿಲ್ಲ' ಎಂದು ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಕೇಳಿದ್ದಕ್ಕೆ ಪಾಸ್ವಾನ್ ಹೇಳಿದರು.

ಇತ್ತೀಚೆಗೆ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 19 ಸ್ಥಾನಗಳನ್ನು ಗೆದ್ದ ನಂತರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಪಕ್ಷದ ನೆಲೆಯನ್ನು ವಿಸ್ತರಿಸಲು ನಾವು ಈಗ ಗಂಭೀರವಾಗಿ ತಯಾರಿ ನಡೆಸುತ್ತಿದ್ದೇವೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಯ ಭಾಗವಾಗಿ ನಾವು ಸ್ಪರ್ಧಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com