Vote chori: ದೆಹಲಿಯ ರಾಮಲೀಲಾ ಮೈದಾನದಲ್ಲಿ ಡಿಸೆಂಬರ್ 14 ರಂದು ಕಾಂಗ್ರೆಸ್ ಮಹಾರ್ಯಾಲಿ

ಭಾರತೀಯ ಚುನಾವಣಾ ಆಯೋಗ(ಇಸಿಐ) ಪಕ್ಷಪಾತಿಯಾಗಿದ್ದು, ಚುನಾವಣೆಗಳ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಮಾನ ಹೋರಾಟದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ನಾಶಪಡಿಸುತ್ತಿದೆ ಎಂದು ಅದು ಆರೋಪಿಸಿದೆ.
Rahul Gandhi
ರಾಹುಲ್ ಗಾಂಧಿ
Updated on

ನವದೆಹಲಿ: ಡಿಸೆಂಬರ್ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಮತ ಕಳ್ಳತನ’ವಿರುದ್ಧ ಮಹಾರ್‍ಯಾಲಿ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಭಾರತೀಯ ಚುನಾವಣಾ ಆಯೋಗ(ಇಸಿಐ) ಪಕ್ಷಪಾತಿಯಾಗಿದ್ದು, ಚುನಾವಣೆಗಳ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಮಾನ ಹೋರಾಟದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ನಾಶಪಡಿಸುತ್ತಿದೆ ಎಂದು ಅದು ಆರೋಪಿಸಿದೆ. ಮತ ಕಳ್ಳತನದ ಭೂತವು ಇಂದು ನಮ್ಮ ಪ್ರಜಾಪ್ರಭುತ್ವದ ಮೇಲೆ ಎರಗಿರುವ ದೊಡ್ಡ ಅಪಾಯವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

‘ನಮ್ಮ ಸಂವಿಧಾನವನ್ನು ನಾಶಮಾಡುವ ಈ ಪ್ರಯತ್ನಗಳ ವಿರುದ್ಧ ದೇಶದಾದ್ಯಂತ ಸಂದೇಶವನ್ನು ಕಳುಹಿಸಲು ಕಾಂಗ್ರೆಸ್, ಡಿಸೆಂಬರ್ 14ರಂದು (ಮಧ್ಯಾಹ್ನ 1.30 ರಿಂದ) ನವದೆಹಲಿಯ ರಾಮಲೀಲಾ ಮೈದಾನದಲ್ಲಿ 'ವೋಟ್ ಚೋರ್ ಗಡ್ಡಿ ಛೋಡ್' ಮಹಾ ರ್‍ಯಾಲಿಯನ್ನು ನಡೆಸಲಿದೆ’ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

‘ನಕಲಿ ಮತದಾರರನ್ನು ಸೇರಿಸುವುದು, ವಿರೋಧ ಪಕ್ಷಗಳ ಬಗ್ಗೆ ಒಲವು ಹೊಂದಿರುವ ಮತದಾರರ ಹೆಸರನ್ನು ಅಳಿಸುವುದು ಮತ್ತು ಸಾಮೂಹಿಕವಾಗಿ ಮತದಾರರ ಪಟ್ಟಿಯನ್ನು ತಿರುಚುವಿಕೆಯಂತಹ ಬಿಜೆಪಿ-ಇಸಿಐನ ದುಷ್ಟ ತಂತ್ರಗಳನ್ನು ತಿರಸ್ಕರಿಸಿ, ಭಾರತದ ಮೂಲೆ ಮೂಲೆಗಳಿಂದ ನಮಗೆ ಕೋಟ್ಯಂತರ ಸಹಿಗಳು ಬಂದಿವೆ’ಎಂದು ವೇಣುಗೋಪಾಲ್ ಹೇಳಿದರು.

Rahul Gandhi
ರಾಹುಲ್ ಗಾಂಧಿಯ 'ವೋಟ್ ಚೋರಿ' ಆರೋಪ ಖಂಡಿಸಿ 272 ಗಣ್ಯರಿಂದ ಬಹಿರಂಗ ಪತ್ರ; ಚುನಾವಣಾ ಆಯೋಗದ ಪರವಾಗಿ ವಾದ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com