ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಆತ್ಮಹತ್ಯೆ; SIR ಒತ್ತಡ ಕಾರಣ ಎಂದ ಕುಟುಂಬ

ಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧದ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಿದೆ.
One more BLO dies by suicide in West Bengal, family alleges SIR-related stress
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಬುಧವಾರ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಎಲ್‌ಒ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಶನಿವಾರ ಮತ್ತೊಬ್ಬ ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧದ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಿದೆ.

ನವೆಂಬರ್ 9 ರಿಂದ, ಮೂವರು ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ಅದರಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರ್ಧಮಾನ್ ಜಿಲ್ಲೆಯ ಮೆಮಾರಿಯಲ್ಲಿ ಮತ್ತೊಬ್ಬ ಅಧಿಕಾರಿ ಮೆದುಳಿನ ಆಘಾತಕ್ಕೆ ಬಲಿಯಾಗಿದ್ದಾರೆ. ಇದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಅಭಿಯಾನಕ್ಕೆ ಸಂಬಂಧಿಸಿದ "ಅಸಹನೀಯ" ಕೆಲಸದ ಹೊರೆಯಿಂದ ಖಿನ್ನತೆಗೆ ಒಳಗಾಗಿ ಈ ಸಾವುಗಳು ಸಂಭವಿಸಿವೆ ಎಂದು ಮೂವರ ಕುಟುಂಬಗಳು ಆರೋಪಿಸಿವೆ.

One more BLO dies by suicide in West Bengal, family alleges SIR-related stress
'ನಾನು ಇನ್ನು ಮುಂದೆ ಈ SIR ಕೆಲಸ ಮಾಡಲು ಸಾಧ್ಯವಿಲ್ಲ': ಕೆಲಸದ ಒತ್ತಡದಿಂದ ಗುಜರಾತ್ ಶಿಕ್ಷಕ ಆತ್ಮಹತ್ಯೆ

ಇಂದು 53 ವರ್ಷದ ಬಿಎಲ್‌ಒ ರಿಂಕು ತರಫ್ದಾರ್ ಅವರು ನಾಡಿಯಾ ಜಿಲ್ಲೆಯ ಕೃಷ್ಣನಗರದಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆತ್ಮಹತ್ಯೆ ಪತ್ರವೊಂದು ಪತ್ತೆಯಾಗಿದ್ದು, ಅದರಲ್ಲಿ "ನಿಗದಿತ ಸಮಯದೊಳಗೆ SIR-ಸಂಬಂಧಿತ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ನಮ್ಮ(BLO) ಅಪಾರ ಒತ್ತಡ ಹಾಕುತ್ತಿದ್ದರು. ಕೆಲಸದ ಒತ್ತಡವನ್ನು ಸಹಿಸಿಕೊಳ್ಳುವುದು ನನಗೆ ಸಾಧ್ಯವಾಗಲಿಲ್ಲ" ಎಂದು ಬರೆಯಲಾಗಿದೆ.

ರಿಂಕು ದೈನಂದಿನ ಕೆಲಸದ ಹೊರೆಯನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. "ಅವರು ಪ್ಯಾರಾ-ಟೀಚರ್ ಆಗಿದ್ದರು. ಆದರೆ ಮನೆ-ಮನೆಗೆ ವಿತರಣೆ ಮತ್ತು ಸಂಪೂರ್ಣ ಪರಿಶೀಲನೆಯ ನಂತರ ಭರ್ತಿ ಮಾಡಿದ ಎಣಿಕೆ ಫಾರ್ಮ್‌ಗಳ ಸಂಗ್ರಹದ ನಂತರ ಮತದಾರರ ಹೆಸರುಗಳ ಡೇಟಾ ನಮೂದು ಮುಂತಾದ ಗಣಕೀಕೃತ ಕೆಲಸಗಳಿಗೆ ಎಂದಿಗೂ ಒಗ್ಗಿಕೊಂಡಿರಲಿಲ್ಲ. ಆಡಳಿತವು ಅವರಿಗೆ ಬಲವಂತವಾಗಿ SIR ಕೆಲಸ ಮಾಡಲು ಹೇಳಿದೆ. ಅಂತಿಮವಾಗಿ, ಖಿನ್ನತೆ ಮತ್ತು ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ಕುಟುಂಬ ಆರೋಪಿಸಿದೆ.

One more BLO dies by suicide in West Bengal, family alleges SIR-related stress
SIR ಹೊರೆ: ಕರ್ತವ್ಯದ ವೇಳೆ ವಡೋದರಾ BLO ಸಹಾಯಕಿ ಸಾವು; ಗುಜರಾತ್‌ನಲ್ಲಿ ನಾಲ್ಕು ದಿನಗಳಲ್ಲಿ ನಾಲ್ವರು ಸಾವು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com