ಅಕ್ರಮ ವಲಸಿಗರ ವಿರುದ್ಧ ಸಮರ ಸಾರಿದ ಯೋಗಿ ಆದಿತ್ಯನಾಥ್; ಜಿಲ್ಲಾಧಿಕಾರಿಗಳಿಗೆ ನೀಡಿದ ಆದೇಶ ಏನು?

ಉತ್ತರ ಪ್ರದೇಶ ನೇಪಾಳದೊಂದಿಗೆ ಮುಕ್ತ ಗಡಿಯನ್ನು ಹಂಚಿಕೊಂಡಿದ್ದು, ಎರಡೂ ದೇಶಗಳ ನಾಗರಿಕರ ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತದೆ ಆದರೆ ಇತರ ರಾಷ್ಟ್ರೀಯತೆಗಳ ನಿವಾಸಿಗಳನ್ನು ಪರಿಶೀಲಿಸುತ್ತದೆ.
Yogi Adityanath
ಸಿಎಂ ಯೋಗಿ ಆದಿತ್ಯನಾಥ್online desk
Updated on

ನವದೆಹಲಿ: ಅಕ್ರಮ ವಲಸಿಗರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ, ರಾಷ್ಟ್ರೀಯ ಭದ್ರತೆ ಮತ್ತು ಸಾಮಾಜಿಕ ಸಾಮರಸ್ಯ ಪ್ರಮುಖ ಆದ್ಯತೆಗಳಾಗಿದ್ದು, ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ತಮ್ಮ ಆದೇಶದಲ್ಲಿ ಹೇಳಿದ್ದಾರೆ.

"ಪ್ರತಿಯೊಂದು ಜಿಲ್ಲಾಡಳಿತ ತಮ್ಮ ಪ್ರದೇಶದಲ್ಲಿ ವಾಸಿಸುವ ಅಕ್ರಮ ವಲಸಿಗರ ಗುರುತಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶಿಸಿದ್ದಾರೆ" ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

"ಒಳನುಸುಳುಕೋರರನ್ನು ಇರಿಸಲು ಪ್ರತಿ ಜಿಲ್ಲೆಯಲ್ಲಿ ತಾತ್ಕಾಲಿಕ ಬಂಧನ ಕೇಂದ್ರಗಳನ್ನು ಸ್ಥಾಪಿಸಬೇಕು" ಎಂದು ಮುಖ್ಯಮಂತ್ರಿಗಳು ನಿರ್ದೇಶಿಸಿದ್ದಾರೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

Yogi Adityanath
ಉತ್ತರ ಪ್ರದೇಶದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ 'ವಂದೇ ಮಾತರಂ' ಹಾಡುವುದು ಕಡ್ಡಾಯ ಶೀಘ್ರದಲ್ಲೆ: ಯೋಗಿ ಆದಿತ್ಯನಾಥ್

ಸಂಕ್ಷಿಪ್ತ ಹೇಳಿಕೆಯ ಪ್ರಕಾರ, ವಿದೇಶಿ ಪೌರತ್ವ ಹೊಂದಿರುವ ಅಕ್ರಮ ವಲಸಿಗರನ್ನು ಈ ಕೇಂದ್ರಗಳಲ್ಲಿ ಇರಿಸಲಾಗುತ್ತದೆ ಮತ್ತು ಅಗತ್ಯ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ.

ಬಂಧನ ಕೇಂದ್ರಗಳಲ್ಲಿ ಇರಿಸಲಾಗಿರುವ ಅಕ್ರಮ ವಲಸಿಗರನ್ನು ಸ್ಥಾಪಿತ ಕಾರ್ಯವಿಧಾನಗಳ ಪ್ರಕಾರ ಅವರ ಮೂಲ ದೇಶಗಳಿಗೆ ಗಡೀಪಾರು ಮಾಡಲಾಗುವುದು ಎಂದು ಆದಿತ್ಯನಾಥ್ ಹೇಳಿದರು.

ಉತ್ತರ ಪ್ರದೇಶ ನೇಪಾಳದೊಂದಿಗೆ ಮುಕ್ತ ಗಡಿಯನ್ನು ಹಂಚಿಕೊಂಡಿದ್ದು, ಎರಡೂ ದೇಶಗಳ ನಾಗರಿಕರ ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತದೆ ಆದರೆ ಇತರ ರಾಷ್ಟ್ರೀಯತೆಗಳ ನಿವಾಸಿಗಳನ್ನು ಪರಿಶೀಲಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com