CJI ಬಿಆರ್ ಗವಾಯಿಯತ್ತ 'ಶೂ' ಎಸೆತ: ಇದು ಕೇವಲ ಅವರ ಮೇಲಿನ ಹಲ್ಲೆಯಷ್ಟೇ ಅಲ್ಲ...; ಸೋನಿಯಾ ಗಾಂಧಿ

ಇದು ಕೇವಲ ಅವರ ಮೇಲಿನ ದಾಳಿಯಷ್ಟೇ ಅಲ್ಲ, ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ.
SoniaGandhi and CJI  B R Gavai Casual images
ಸೋನಿಯಾ ಗಾಂಧಿ, ಸಿಜೆಐ ಬಿಆರ್ ಗವಾಯಿ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲಿನ ಶೂ ಎಸೆತ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

ಈ ಮಧ್ಯೆ ಇದು ಕೇವಲ ಅವರ ಮೇಲಿನ ದಾಳಿಯಷ್ಟೇ ಅಲ್ಲ, ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ.

"ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರ ಮೇಲಿನ ದಾಳಿಯನ್ನು ಸುಪ್ರೀಂ ಕೋರ್ಟ್‌ನಲ್ಲಿಯೇ ಖಂಡಿಸಲು ಯಾವುದೇ ಪದಗಳು ಸಾಕಾಗುವುದಿಲ್ಲ. ಇದು ಅವರ ಮೇಲಿನ ಹಲ್ಲೆ ಮಾತ್ರವಲ್ಲ, ನಮ್ಮ ಸಂವಿಧಾನದ ಮೇಲಿನ ಹಲ್ಲೆಯಾಗಿದೆ" ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ತುಂಬಾ ಕರುಣಾಮಯಿಯಾಗಿದ್ದಾರೆ. ಆದರೆ ರಾಷ್ಟ್ರವು ತೀವ್ರ ದುಃಖ ಮತ್ತು ಆಕ್ರೋಶದ ಭಾವನೆಯೊಂದಿಗೆ ಒಗ್ಗಟ್ಟಿನಿಂದ ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಅವರು ಕರೆ ನೀಡಿದ್ದಾರೆ.

ಸೋಮವಾರ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಕೋರ್ಟ್ ರೂಂ ನಂ.1ರಲ್ಲಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಗಲಾಟೆ ಮಾಡಿದ್ದು, ವೇದಿಕೆಯ ಬಳಿಗೆ ಬಂದು ತಮ್ಮ ಶೂ ತೆಗೆದು ಮುಖ್ಯ ನ್ಯಾಯಮೂರ್ತಿಯತ್ತ ಎಸೆಯಲು ಪ್ರಯತ್ನಿಸಿದ್ದಾರೆ.

SoniaGandhi and CJI  B R Gavai Casual images
Supreme Court: CJI ಮೇಲೆ 'ಶೂ' ಎಸೆತ; ವಕೀಲ ರಾಕೇಶ್ ಕಿಶೋರ್ ಅಮಾನತುಪಡಿಸಿದ ಬಾರ್ ಕೌನ್ಸಿಲ್!

ತಕ್ಷಣ ನ್ಯಾಯಾಲಯದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ಅವರನ್ನು ಬಂಧಿಸುತ್ತಿದ್ದಂತೆ, ಸನಾತನ ಧರ್ಮದ ಅವಮಾನವನ್ನು ನಾವು ಸಹಿಸುವುದಿಲ್ಲ ಎಂದು ಕಿಶೋರ್ ಕೂಗುವುದು ಕೇಳಿಸಿತು. ತಕ್ಷಣ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಹೊರಕ್ಕೆ ಕರೆದೊಯ್ದು ಸುಪ್ರೀಂ ಕೋರ್ಟ್‌ನ ಭದ್ರತಾ ಘಟಕಕ್ಕೆ ಹಸ್ತಾಂತರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com