ಒಡಿಶಾ: ಬಿಜೆಪಿ ನಾಯಕ ಪಿತವಾಸ್ ಪಾಂಡ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ

ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಾಂಡ ಅವರ ಮನೆಯ ಬಳಿ ಬಂದು ಅವರ ಮೇಲೆ ಗುಂಡು ಹಾರಿಸಿದ್ದಾರೆ.
Odisha's BJP leader
ಒಡಿಶಾ ಬಿಜೆಪಿ ನಾಯಕನ ಹತ್ಯೆ
Updated on

ಒಡಿಶಾದ ಬೆರ್ಹಾಂಪುರದಲ್ಲಿ ಕಳೆದ ರಾತ್ರಿ ಬಿಜೆಪಿ ನಾಯಕ ಪಿತವಾಸ್ ಪಾಂಡ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಬೆರ್ಹಾಂಪುರ ಎಸ್ಪಿ ಡಾ. ಸರವಣ ವಿವೇಕ್ ಎಂ ಹೇಳಿದ್ದಾರೆ. ತನಿಖೆ ನಡೆಸಲು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ನಾಯಕ ಪಿತವಾಸ್ ಪಾಂಡ ಹಿರಿಯ ವಕೀಲರು ಮತ್ತು ಆರ್‌ಟಿಐ ಕಾರ್ಯಕರ್ತರಾಗಿದ್ದರು.

ನಡೆದ ಘಟನೆಯೇನು?

ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಾಂಡ ಅವರ ಮನೆಯ ಬಳಿ ಬಂದು ಅವರ ಮೇಲೆ ಗುಂಡು ಹಾರಿಸಿದರು. ತಕ್ಷಣ ಅವರನ್ನು ಬೆರ್ಹಾಂಪುರ್‌ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು.

Odisha's BJP leader
ಉಡುಪಿ: ಹಾಡಹಗಲೇ ರೌಡಿಶೀಟರ್ ಗುಂಡಿಕ್ಕಿ ಹತ್ಯೆ, ಭದ್ರತೆ ಹೆಚ್ಚಿಸಿದ ಪೊಲೀಸರು

ಅಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ದಾಳಿಕೋರರನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ದಾಳಿಯ ಬಗ್ಗೆ ಪ್ರತಿಪಕ್ಷಗಳು ತೀವ್ರ ಖಂಡಿಸಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com