ಬಿಹಾರ ಚುನಾವಣೆ: ನಿತೀಶ್ ಕುಮಾರ್ NDA CM ಅಭ್ಯರ್ಥಿ; ಕೇಂದ್ರ ಸಚಿವ ಗಿರಿರಾಜ್ ಸಿಂಗ್

ರಾಜ್ಯ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಕುರಿತು ಎನ್‌ಡಿಎ ಮಿತ್ರಪಕ್ಷಗಳಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಮಾತುಕತೆಗಳು ಸುಗಮವಾಗಿ ನಡೆಯುತ್ತಿವೆ ಎಂದರು.
Nitish Kumar
ನಿತೀಶ್ ಕುಮಾರ್
Updated on

ಪಾಟ್ನಾ: ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ(ಎನ್‌ಡಿಎ) ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇಂದ್ರ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಆರ್‌ಜೆಡಿ ಪಕ್ಷದವರಿಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು. ಆದರೆ ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿಯನ್ನು 'ಸಾಮೂಹಿಕವಾಗಿ' ನಿರ್ಧರಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಹೇಳಿಕೆ ನೀಡಿದ ಒಂದು ದಿನದ ನಂತರ ಗಿರಿರಾಜ್ ಸಿಂಗ್ ಅವರ ಈ ಹೇಳಿಕೆ ಹೊರಬಿದ್ದಿದೆ.

ತೇಜಸ್ವಿ ನೇತೃತ್ವದಲ್ಲಿ, ಆರ್‌ಜೆಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 75 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈ ಮೂಲಕ ಆರ್‌ಜೆಡಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿತ್ತು.

Nitish Kumar
ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆ; ಕೈ ಮುಗಿದು ಕುಳಿತ ನಿತೀಶ್ ಕುಮಾರ್: ವ್ಯಾಪಕ ಟೀಕೆ

ಬಿಜೆಪಿಯ ಫೈರ್‌ಬ್ರಾಂಡ್ ನಾಯಕ ಮತ್ತು ಬೇಗುಸರಾಯ್‌ನ ಸಂಸದ ಗಿರಿರಾಜ್ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ರಾಜ್ಯ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಕುರಿತು ಎನ್‌ಡಿಎ ಮಿತ್ರಪಕ್ಷಗಳಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಮಾತುಕತೆಗಳು ಸುಗಮವಾಗಿ ನಡೆಯುತ್ತಿವೆ ಎಂದರು.

"ತೇಜಸ್ವಿ ಆರ್‌ಜೆಡಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ, ಮಹಾಮೈತ್ರಿಕೂಟದ ಸಿಎಂ ಅಭ್ಯರ್ಥಿಯಲ್ಲ ಎಂದು ಕಾಂಗ್ರೆಸ್ ಈಗಾಗಲೇ ಸ್ಪಷ್ಟಪಡಿಸಿದೆ. ಈಗ, ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಕಾಂಗ್ರೆಸ್ ನಾಯಕರ ಹೇಳಿಕೆಯ ನಂತರ ಚಿಂತಿತರಾಗಿದ್ದಾರೆ ಮತ್ತು ಭಯಭೀತರಾಗಿದ್ದಾರೆ ... ವಿರೋಧ ಪಕ್ಷಗಳಲ್ಲಿ ನಾಯಕತ್ವ ಇನ್ನೂ ನಿರ್ಧರಿಸಲಾಗಿಲ್ಲ. ಆದರೆ ಎನ್‌ಡಿಎಯ ನೀತಿ, ನಾಯಕತ್ವ ಮತ್ತು ಉದ್ದೇಶ ಎಲ್ಲವೂ ಸಿದ್ಧವಾಗಿದೆ ಮತ್ತು ಯಾವುದೇ ಅಸಮಾಧಾನವಿಲ್ಲ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com