ಕಝಕಿಸ್ತಾನದಲ್ಲಿ ಭಾರತ ಮೂಲದ ಎಂಬಿಬಿಎಸ್ ವಿದ್ಯಾರ್ಥಿಗೆ brain stroke: ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಏರ್ ಲಿಫ್ಟ್!

ಜೈಪುರದ ಶಹಪುರ ನಿವಾಸಿ ಮತ್ತು 2021 ರಿಂದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ರಾಹುಲ್ ಘೋಸಲ್ಯ ಅವರನ್ನು ಅಕ್ಟೋಬರ್ 8 ರಿಂದ ಸ್ಥಳೀಯ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು.
ಕಝಕಿಸ್ತಾನದಲ್ಲಿ ಭಾರತ ಮೂಲದ ಎಂಬಿಬಿಎಸ್ ವಿದ್ಯಾರ್ಥಿಗೆ brain stroke: ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಏರ್ ಲಿಫ್ಟ್!
Updated on

ನವದೆಹಲಿ:ಕಝಾಕಿಸ್ತಾನದಲ್ಲಿ ಮೆದುಳು ಪಾರ್ಶ್ವವಾಯುವಿಗೆ ಒಳಗಾದ ರಾಜಸ್ಥಾನದ 22 ವರ್ಷದ ಭಾರತೀಯ ಎಂಬಿಬಿಎಸ್ ವಿದ್ಯಾರ್ಥಿಯನ್ನು ಸೋಮವಾರ ಸಂಜೆ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ವಿಮಾನದ ಮೂಲಕ ಕರೆದೊಯ್ಯಲಾಯಿತು.

ಜೈಪುರದ ಶಹಪುರ ನಿವಾಸಿ ಮತ್ತು 2021 ರಿಂದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ರಾಹುಲ್ ಘೋಸಲ್ಯ ಅವರನ್ನು ಅಕ್ಟೋಬರ್ 8 ರಿಂದ ಸ್ಥಳೀಯ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ವೈದ್ಯಕೀಯ ತಂಡಗಳು ಮತ್ತು ಅಧಿಕಾರಿಗಳ ಸಂಘಟಿತ ಪ್ರಯತ್ನಗಳ ನಂತರ, ಅವರನ್ನು ಕ್ರಿಟಿಕಲ್ ಕೇರ್ ಏರ್ ಆಂಬ್ಯುಲೆನ್ಸ್‌ನಲ್ಲಿ ಜೈಪುರಕ್ಕೆ ಕರೆದೊಯ್ಯಲಾಯಿತು.

ರಾಹುಲ್ ಅವರನ್ನು ಎಸ್‌ಎಂಎಸ್ ಆಸ್ಪತ್ರೆಯ ವೈದ್ಯಕೀಯ ಐಸಿಯುಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ನೇತೃತ್ವದ ನಾಲ್ವರು ಸದಸ್ಯರ ಸಮಿತಿಯು ಅವರ ಚಿಕಿತ್ಸೆಯನ್ನು ನೋಡಿಕೊಳ್ಳುತ್ತಿದೆ.

ವಿಶೇಷ ಆಂಬ್ಯುಲೆನ್ಸ್ ಮತ್ತು ಕ್ರಿಟಿಕಲ್ ಕೇರ್ ತಂಡವು ಅವರನ್ನು ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ವರ್ಗಾಯಿಸಲು ಅನುಕೂಲ ಮಾಡಿಕೊಟ್ಟಿತು. ರಾಹುಲ್ ಅವರ ಪೋಷಕರು ಸಾಮಾಜಿಕ ಮಾಧ್ಯಮಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ ನಂತರ ಅವರನ್ನು ಶಿಫ್ಟ್ ಮಾಡಲು ಸಾಧ್ಯವಾಯಿತು. ಹಲವಾರು ಸಾಮಾಜಿಕ ಸಂಘಟನೆಗಳು ಅವರನ್ನು ಹೆಚ್ಚಿನ ಆರೈಕೆಗಾಗಿ ಮರಳಿ ಕರೆತರುವಲ್ಲಿ ಬೆಂಬಲ ನೀಡಿವೆ.

ಕಝಕಿಸ್ತಾನದಲ್ಲಿ ಭಾರತ ಮೂಲದ ಎಂಬಿಬಿಎಸ್ ವಿದ್ಯಾರ್ಥಿಗೆ brain stroke: ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಏರ್ ಲಿಫ್ಟ್!
ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಮೆದುಳಿಗೆ ಗಾಯ: ದೆಹಲಿ ಆಸ್ಪತ್ರೆಗೆ ಏರ್ ಲಿಫ್ಟ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com