Chhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!

ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.
Security forces Casual Images
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
Updated on

ಗರಿಯಾಬಾದ್: ಛತ್ತೀಸ್‌ಗಢದ ಗರಿಯಾಬಾದ್ ಜಿಲ್ಲೆಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಹಿರಿಯ ನಾಯಕ ಸೇರಿದಂತೆ 10 ನಕ್ಸಲೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಹತ್ಯೆಯಾದವರಲ್ಲಿ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಮನೋಜ್ ಕೂಡಾ ಒಬ್ಬರಾಗಿದ್ದಾರೆ. ಈತ ಮೊಡೆಮ್ ಬಾಲಕೃಷ್ಣ ಎಂದು ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.

ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

ಬೆಳಗ್ಗೆಯಿಂದಲೇ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಹಲವು ಹಿರಿಯ ನಕ್ಸಲ್ ನಾಯಕರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್ ಕೋಬ್ರಾ ಕಮಾಂಡೋಗಳು ಮತ್ತು ಛತ್ತೀಸ್‌ಗಢ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಹಿರಿಯ ನಕ್ಸಲ್ ನಾಯಕ ಮನೋಜ್ ಸೇರಿದಂತೆ 10 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

Security forces Casual Images
ಛತ್ತೀಸ್‌ಗಢ: ನಾರಾಯಣಪುರದಲ್ಲಿ 16 ನಕ್ಸಲರು ಪೊಲೀಸರಿಗೆ ಶರಣು

ಕಾರ್ಯಾಚರಣೆ ಮುಗಿದ ನಂತರ ಪ್ರತ್ಯೇಕವಾಗಿ ಸಮಗ್ರ ವಿವರ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗರಿಯಾಬಂದ್ ಜಿಲ್ಲೆಯಲ್ಲಿ ನಡೆಯುತ್ತಿರುವ ನಕ್ಸಲ್ ನಿರ್ಮೂಲನಾ ಕಾರ್ಯಾಚರಣೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com