ಛತ್ತೀಸ್‌ಗಢ: ನಾರಾಯಣಪುರದಲ್ಲಿ 16 ನಕ್ಸಲರು ಪೊಲೀಸರಿಗೆ ಶರಣು

ಬುಧವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 16 ಮಾವೋವಾದಿಗಳು ಶರಣಾಗಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ 16 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 16 ಮಾವೋವಾದಿಗಳು ಶರಣಾಗಿದ್ದಾರೆ.

"ಟೊಳ್ಳು" ಮಾವೋವಾದಿ ಸಿದ್ಧಾಂತ, ಮುಗ್ಧ ಬುಡಕಟ್ಟು ಜನಾಂಗದವರ ಮೇಲೆ ನಕ್ಸಲರು ನಡೆಸಿದ ದೌರ್ಜನ್ಯಗಳು ಮತ್ತು ನಿಷೇಧಿತ ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ಅವರು ನಿರಾಶೆಗೊಂಡಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ಅವರು ತಿಳಿಸಿದ್ದಾರೆ.

Representational image
'ಟೊಳ್ಳು' ಮಾವೋವಾದಿ ಸಿದ್ಧಾಂತ: ಛತ್ತೀಸಗಢದ ಸುಕ್ಮಾದಲ್ಲಿ ಒಂಬತ್ತು ಮಹಿಳೆಯರು ಸೇರಿ 20 ನಕ್ಸಲರು ಶರಣು

ಎಲ್ಲಾ 16 ನಕ್ಸಲರು ಜನತಾನ ಸರ್ಕಾರ್, ಚೇತನ ನಾಟ್ಯ ಮಂಡಳಿ ಮತ್ತು ಮಾವೋವಾದಿಗಳ ಪಂಚಾಯತ್ ಮಿಲಿಟಿಯಾ ಸದಸ್ಯರು ಸೇರಿದಂತೆ ವಿವಿಧ ಘಟಕಗಳಿಗೆ ಸೇರಿದ ಕೆಳ ಹಂತದ ನಕ್ಸಲರು ಶರಣಾಗಿದ್ದಾರೆ ಎಂದು ಅವರು ಹೇಳಿದರು.

ವಿಚಾರಣೆಯ ಸಮಯದಲ್ಲಿ, ಉನ್ನತ ಮಾವೋವಾದಿ ನಾಯಕರು ಬುಡಕಟ್ಟು ಜನಾಂಗದವರ "ನಿಜವಾದ ಶತ್ರುಗಳು" ಎಂದು ಶರಣಾದ ನಕ್ಸಲರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com