ಸೇನೆಗೆ ಭಾರತೀಯ ಪ್ರಜೆಗಳ ಸೇರ್ಪಡೆ: ನೇಮಕಾತಿ ಕೈಬಿಟ್ಟು, ನಮ್ಮ ನಾಗರೀಕರ ಬಿಡುಗಡೆಗೊಳಿಸಿ; ರಷ್ಯಾಗೆ ಭಾರತ ಆಗ್ರಹ

ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ.
External Affairs Ministry spokesperson Randhir Jaiswal.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ online desk
Updated on

ನವದಹಲಿ: ಸೇನೆಗೆ ಭಾರತೀಯ ಪ್ರಜೆಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ರಷ್ಯಾ ನಡೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ನೇಮಕಾತಿ ಕೈಬಿಟ್ಟು ಕೂಡಲೇ ಭಾರತೀಯರನ್ನು ಬಿಡುಗಡೆಗೊಳಿಸುವಂತೆ ಗುರುವಾರ ಆಗ್ರಹಿಸಿದೆ.

ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ದೂರಬೇಕು. ಏಕೆಂದರೆ ಇದು ತುಂಬಾ ಅಪಾಯಕಾರಿ ನಡೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ. ಇದೀಗ ಮತ್ತೆ ಭಾರತೀಯರಿಗೆ ಎಚ್ಚರಿಕೆ ನೀಡುತ್ತಿದ್ದೇವೆಂದು ತಿಳಿಸಿದೆ.

ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇವೆ. ಈ ಪದ್ದತಿಯನ್ನ ಕೊನೆಗೊಳಿಸಬೇಕು. ನಮ್ಮ ಪ್ರಜೆಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದೇವೆ. ರಷ್ಯಾ ಸೇನೆಯಲ್ಲಿ ಸಿಲುಕಿರುವ ಕುಟುಂಬದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಸಚಿವಾಲಯ ತಿಳಿಸಿದೆ.

ಇದೇ ವೇಳೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯ ಪ್ರಜೆಗಳು ಇದರಿಂದ ದೂರವಿರಬೇಕೆಂದು ಹೇಳಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ. ಇದು ತುಂಬಾ ಅಪಾಯಕಾರಿಯಾದ ನಡೆ ಎಂದೂ ಎಚ್ಚರಿಸಿದೆ.

External Affairs Ministry spokesperson Randhir Jaiswal.
ರಷ್ಯಾ ಅಧ್ಯಕ್ಷ ಪುಟಿನ್ ವರ್ತನೆ ನಿರಾಶೆ ತಂದಿದೆ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com