ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್ ಗೆ ಇಬ್ಬರು ನಕ್ಸಲರು ಬಲಿ

ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿವೆ.
Security force
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
Updated on

ರಾಯ್ಪುರ: ಛತ್ತೀಸ್‌ಗಢದ ರಾಯ್ಪುರದಿಂದ ದಕ್ಷಿಣಕ್ಕೆ ಸುಮಾರು 400 ಕಿ.ಮೀ ದೂರದಲ್ಲಿರುವ ಸಂಘರ್ಷಪೀಡಿತ ಬಿಜಾಪುರ ಜಿಲ್ಲೆಯ ನೈಋತ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯ ಇಬ್ಬರು ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

“ಬಿಜಾಪುರ ಜಿಲ್ಲೆಯ ನಿರ್ದಿಷ್ಟ ಸ್ಥಳದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿ ನಿರಂತರವಾಗಿ ಮುಂದುವರೆದಿದೆ. ಎನ್‌ಕೌಂಟರ್ ಸ್ಥಳದಿಂದ ಇಬ್ಬರು ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಭದ್ರತಾ ಪಡೆಗಳ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.

Security force
Chhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!

ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿವೆ.

ಗುಂಡಿನ ಚಕಮಕಿಯ ಜೊತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿರುವುದರಿಂದ, ಮಾವೋವಾದಿ ವಿರೋಧಿ ಅಭಿಯಾನದಲ್ಲಿ ತೊಡಗಿರುವ ಸಿಬ್ಬಂದಿಯ ಸುರಕ್ಷತಾ ಕಾಳಜಿಯ ಕಾರಣದಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ.

ಗುರುವಾರ, ರಾಯ್‌ಪುರದಿಂದ ಪೂರ್ವಕ್ಕೆ ಸುಮಾರು 150 ಕಿ.ಮೀ ದೂರದಲ್ಲಿರುವ ಗರಿಯಾಬಂದ್ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಯ ಕೇಂದ್ರ ಸಮಿತಿ ಸದಸ್ಯ ಮನೋಜ್ ಬಾಲಕೃಷ್ಣ ಸೇರಿದಂತೆ 10 ಮಾವೋವಾದಿಗಳನ್ನು ಭದ್ರತಾ ಪಡೆಗಳ ಜಂಟಿ ತಂಡ ಗುಂಡಿಕ್ಕಿ ಕೊಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com