Amit Khare
ಅಮಿತ್ ಖರೆ

ಧನ್ಕರ್ ವಿಚಾರವಾಗಿ ಎಚ್ಚೆತ್ತ NDA: ನೂತನ ಉಪರಾಷ್ಟ್ರಪತಿಗಳ ಕಾರ್ಯದರ್ಶಿಯಾಗಿ ಪ್ರಧಾನಿ ಮೋದಿ ಸಲಹೆಗಾರ ಅಮಿತ್ ಖರೆ ನೇಮಕ!

ಭಾರತೀಯ ಆಡಳಿತ ಸೇವೆಯ ಮಾಜಿ ಅಧಿಕಾರಿ ಅಮಿತ್ ಖರೆ ಅವರನ್ನು ಹೊಸದಾಗಿ ಆಯ್ಕೆಯಾಗಿರುವ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರ ನೇಮಕಾತಿ ಅವಧಿ ಮೂರು ವರ್ಷ ಇರುತ್ತದೆ.
Published on

ನವದೆಹಲಿ: ಭಾರತೀಯ ಆಡಳಿತ ಸೇವೆಯ ಮಾಜಿ ಅಧಿಕಾರಿ ಅಮಿತ್ ಖರೆ ಅವರನ್ನು ಹೊಸದಾಗಿ ಆಯ್ಕೆಯಾಗಿರುವ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರ ನೇಮಕಾತಿ ಅವಧಿ ಮೂರು ವರ್ಷ ಇರುತ್ತದೆ. ಅಮಿತ್ ಖರೆ ಪ್ರಸ್ತುತ ಪ್ರಧಾನಿ ಮೋದಿ ಅವರ ಸಲಹೆಗಾರರಾಗಿದ್ದಾರೆ. 2021ರ ಅಕ್ಟೋಬರ್ 12ರಿಂದ ಅವರು ಪ್ರಧಾನಿ ಕಚೇರಿಯಲ್ಲಿ ಸಾಮಾಜಿಕ ವಲಯಕ್ಕೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ, 2020 ಅನ್ನು ರೂಪಿಸಿದ ಮತ್ತು ಜಾರಿಗೆ ತಂದ ಪ್ರಮುಖ ತಂಡದ ಭಾಗವಾಗಿದ್ದರು.

ಹೊಸ ನೇಮಕಾತಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ಸಂಪುಟದ ನೇಮಕಾತಿ ಸಮಿತಿಯು ಜಾರ್ಖಂಡ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ (ನಿವೃತ್ತ) ಅಮಿತ್ ಖರೆ ಅವರನ್ನು ಭಾರತದ ಉಪರಾಷ್ಟ್ರಪತಿ ಕಾರ್ಯದರ್ಶಿಯಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ. ಖರೆ ನೇಮಕಾತಿ ಕಾರ್ಯದರ್ಶಿ ಹುದ್ದೆ ಮತ್ತು ವೇತನದಲ್ಲಿ ಗುತ್ತಿಗೆ ಆಧಾರದ ಮೇಲೆ, ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಇರುತ್ತದೆ.

ಖರೆ ಅವರು ಸಾರ್ವಜನಿಕ ಸೇವೆಯಲ್ಲಿನ ತಮ್ಮ ವಿಶಿಷ್ಟ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. 2018ರ ಮೇ 31ರಂದು ಭಾರತ ಸರ್ಕಾರಕ್ಕೆ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿಯಾಗಿ ಸೇರಿದರು. ನಂತರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಕಾರ್ಯದರ್ಶಿಯಾಗಿ ಮತ್ತು ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

1985ರ ಬ್ಯಾಚ್ ಜಾರ್ಖಂಡ್ ಕೇಡರ್ ಐಎಎಸ್ ಅಧಿಕಾರಿಯಾಗಿದ್ದ ಮಾಜಿ ಅಧಿಕಾರಿ ಅಮಿತ್ ಖರೆ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಮಾಹಿತಿ ಪ್ರಸಾರ ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿದ್ದರು. ಅವರು 1990 ರ ದಶಕದಲ್ಲಿ ಜಾರ್ಖಂಡ್‌ನ ಚೈಬಾಸಾದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದರು. ಅವರ ಅಧಿಕಾರಾವಧಿಯಲ್ಲಿ ಮೇವು ಹಗರಣ ಬಹಿರಂಗವಾಯಿತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ, ಅವರು ಬರೆದ ಎಫ್‌ಐಆರ್ ಆಧಾರದ ಮೇಲೆ ಮೇವು ಹಗರಣದ ತನಿಖೆಯನ್ನು ಪ್ರಾರಂಭಿಸಲಾಯಿತು. ಇದರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಜಗನ್ನಾಥ್ ಮಿಶ್ರಾ ಸೇರಿದಂತೆ ಅನೇಕ ಉನ್ನತ ನಾಯಕರು ಮತ್ತು ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದಿತ್ತು.

Amit Khare
Assam: ಕಾಂಗ್ರೆಸ್ ನಿಂದ ಪಾಕ್ ಉಗ್ರರಿಗೆ ಬೆಂಬಲ, ನುಸುಳುಕೋರರ ರಕ್ಷಣೆ: ಪ್ರಧಾನಿ ಮೋದಿ ಆರೋಪ! Video

ಲಾಲು ಪ್ರಸಾದ್ ಯಾದವ್ ಇತ್ತೀಚಿನವರೆಗೂ ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಂಚಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಪ್ರಧಾನಿ ಮೋದಿಯವರ ನಿರ್ದೇಶನದ ಮೇರೆಗೆ 2020 ರ ಹೊಸ ಶಿಕ್ಷಣ ನೀತಿಯನ್ನು ರೂಪಿಸುವಲ್ಲಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿದ್ದಾಗ ಡಿಜಿಟಲ್ ಮಾಧ್ಯಮ ನಿಯಮಗಳನ್ನು ಬದಲಾಯಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಅಮಿತ್ ಖರೆ ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಪದವೀಧರೆ ಮತ್ತು ಐಐಎಂ ಅಹಮದಾಬಾದ್‌ನಿಂದ ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮಿತ್ ಖರೆ ಅವರ ಪತ್ನಿ ನಿಧಿ ಖರೆ ಕೂಡ ಜಾರ್ಖಂಡ್ ಕೇಡರ್‌ನ 1992 ರ ಬ್ಯಾಚ್ ಐಎಎಸ್ ಅಧಿಕಾರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com